ಬ್ರೇಕಿಂಗ್ ನ್ಯೂಸ್
05-08-22 10:40 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 5: ಹಳೆ ಪೇಪರ್, ಹಳೆ ಕಬ್ಬಿಣ ಅಂತ ಸಿನಿಮಾ ಪದ್ಯ ಕೇಳಿರಬಹುದು. ಹೌದು.. ಈಗ ಹಳೆ ಪೇಪರ್ ಅನ್ನೋದು ಬರೀಯ ಗುಜರಿ ಸರಕಲ್ಲ. ಅತ್ಯಂತ ಬೇಡಿಕೆಯ ವಸ್ತುವಾಗಿದೆ. ತುಂಡು ಪೇಪರನ್ನೂ ಒಟ್ಟು ಮಾಡಿ, ಗುಜರಿಗೆ ಕೊಟ್ಟರೆ ಕೈತುಂಬ ಗಳಿಸುವ ದಿನ ಬಂದಿದೆ. ವರ್ಷದ ಹಿಂದೆ ಕೇವಲ ಕೇಜಿಗೆ 12ರಿಂದ 14 ರೂಪಾಯಿ ಇದ್ದ ಹಳೆ ಪೇಪರ್ ರೇಟು ಒಂದೇ ವರ್ಷದಲ್ಲಿ ದುಪ್ಪಟ್ಟು ಆಗಿದೆ. ಹೀಗಾಗಿ ಮನೆಯಲ್ಲಿ ಅಲ್ಲಲ್ಲಿ ಬೀಸಾಕುತ್ತಿದ್ದ ಹಳೆ ಪತ್ರಿಕೆಯನ್ನೆಲ್ಲ ಜನರು ಜೋಪಾನ ಇಟ್ಟುಕೊಳ್ಳಲು ತೊಡಗಿದ್ದಾರೆ.
ವರ್ಷದ ಹಿಂದೆ ನ್ಯೂಸ್ ಪ್ರಿಂಟ್ ದರವು ಕೇಜಿಗೆ 35 ರೂಪಾಯಿ ಇತ್ತು. ಈಗ ಅದರ ರೇಟು ಕೇಜಿಗೆ 80ರಿಂದ 90 ರೂಪಾಯಿ ಆಗಿದೆ. ನ್ಯೂಸ್ ಪ್ರಿಂಟ್ ದರ ಹೆಚ್ಚಿರುವುದರಿಂದ ಸಹಜವಾಗೇ ಹಳೆ ಪತ್ರಿಕೆಗಳ ದರವೂ ಹೆಚ್ಚಿದೆ. ಇಲ್ಲಿ ರೇಟ್ ಏರುವುದಕ್ಕೂ ಯುಕ್ರೇನ್- ರಷ್ಯಾ ಯುದ್ಧಕ್ಕೂ ತಾಳೆಯಿದೆ. ಅಲ್ಲಿನ ಯುದ್ಧದ ಕಾರಣ ಚೀನಾದಿಂದ ಬರುತ್ತಿದ್ದ ನ್ಯೂಸ್ ಪ್ರಿಂಟ್ ಕಡಿತಗೊಂಡಿದೆ. ಹೀಗಾಗಿ ಪೇಪರ್ ಮಿಲ್ ಗಳು ನ್ಯೂಸ್ ಪ್ರಿಂಟ್ ದರವನ್ನೂ ಒಮ್ಮೆಲೇ ಏರಿಸಿದೆ. ಇದರಿಂದಾಗಿ ಹಳೆ ಪತ್ರಿಕೆಯ ದರವೂ ಏರತೊಡಗಿದೆ.
ಗುಜರಿ ವ್ಯಾಪಾರಿಗಳು ಮನೆಗಳಿಂದ ಕೇಜಿಗೆ 25-26 ರೂಪಾಯಿ ಕೊಟ್ಟು ಖರೀದಿಸುವ ಹಳೆ ಪತ್ರಿಕೆಯನ್ನು ಎರಡು ರೂ. ಹೆಚ್ಚಿಗೆ ದರ ಪಡೆದು ನೇರವಾಗಿ ಪೇಪರ್ ಮಿಲ್ ಗಳಿಗೆ ಸಪ್ಲೈ ಮಾಡುತ್ತಾರೆ. ಮಿಲ್ ಗಳಲ್ಲಿ ಅದನ್ನು ರಿ ಸೈಕಲ್ ಮಾಡಿ, ಮತ್ತೆ ನ್ಯೂಸ್ ಪ್ರಿಂಟ್ ಆಗಿಸಿ ಕೇಜಿಗೆ 60 ರೂ.ಗೆ ಮಾರುತ್ತಾರೆ. ಹಳೆ ಪತ್ರಿಕೆ, ಹಳೆ ನೋಟ್ ಬುಕ್ಸ್ ಇವೆಲ್ಲದಕ್ಕೂ ಈಗ ಭಾರೀ ಡಿಮ್ಯಾಂಡ್ ಆಗಿದೆ. ಹಿಂದೆಲ್ಲಾ ಇಂಗ್ಲಿಷ್ ಹಳೆ ಪತ್ರಿಕೆಗಳಿಗೆ ಹೆಚ್ಚು ರೇಟ್ ಇತ್ತು. ಈಗ ಕನ್ನಡ- ಇಂಗ್ಲಿಷ್ ಎಲ್ಲ ಪತ್ರಿಕೆ, ಪುಸ್ತಕಕ್ಕೂ ಒಂದೇ ರೇಟಲ್ಲಿ ಗುಜರಿ ವ್ಯಾಪಾರಿಗಳು ಖರೀದಿಸುತ್ತಾರೆ. ಒಟ್ನಲ್ಲಿ ಯುಕ್ರೇನಲ್ಲಿ ಯುದ್ಧ ಆಗಿರುವುದು ಗುಜರಿ ಪತ್ರಿಕೆಗಳಿಗೆ ಡಿಮ್ಯಾಂಡ್ ಆಗುವಂತಾಗಿದೆ.
The demand for old newspapers and scrap paper has risen in the market. While old newspapers are being bought at up to Rs 26 a kilo, the price is likely to go up further. Last year, old newspapers were bought at Rs 12 to 15 a kilo which has now doubled. While households are carefully staking up old newspapers at home, scrap vendors have become equally careful in keeping the scrap paper intact.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 11:27 am
Mangalore Correspondent
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
Speaker U.T. Khader: ಅಶಕ್ತರಿಗೆ ಶಕ್ತಿ ನೀಡುವುದೇ...
16-11-25 08:43 pm
ಅಡಿಕೆ ಬೆಳೆಗಾರರ ಕಷ್ಟಕ್ಕೆ ಸ್ಪಂದಿಸಿದ ಕೇಂದ್ರ ಸರ್ಕ...
16-11-25 04:40 pm
18-11-25 11:18 am
Bangalore Correspondent
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm