ಬ್ರೇಕಿಂಗ್ ನ್ಯೂಸ್
08-08-22 09:42 pm Mangalore Correspondent ಕರಾವಳಿ
ಉಳ್ಳಾಲ, ಆ.8 : ಉಚ್ಚಿಲ, ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ಮತ್ತಷ್ಟು ತೀವ್ರಗೊಂಡಿದ್ದು ಕಡಲ ತೀರದಲ್ಲಿದ್ದ ಗೆಸ್ಟ್ ಹೌಸ್ ಕಟ್ಟಡವೊಂದು ಕಡೆಗೂ ಕಡಲು ಪಾಲಾಗಿದೆ.
ಈ ಬಾರಿಯ ಮಳೆಗಾಲ ಆರಂಭದಲ್ಲೇ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿತ್ತು. ಬೀಚ್ ರಸ್ತೆಯನ್ನೇ ಕಡಲು ನುಂಗಿ ಹಾಕಿದ್ದು ತೀರದಲ್ಲಿರುವ ಬಹುತೇಕ ಮನೆಗಳು, ಗೆಸ್ಟ್ ಹೌಸ್ ಗಳು ಅಪಾದಂಚಿನಲ್ಲಿದ್ದವು. ಆಬಳಿಕ ಬಟ್ಟಪ್ಪಾಡಿ ಪ್ರದೇಶಕ್ಕೆ ಕಡಲ್ಕೊರೆತ ವೀಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರ ದಂಡೇ ಆಗಮಿಸಿತ್ತು.

ಬಟ್ಟಂಪಾಡಿಯಲ್ಲಿ "ವಿಟಮಿನ್ ಸಿ" ಎಂಬ ಹೆಸರಿನ ಅಕ್ರಮ ಗೆಸ್ಟ್ ಹೌಸ್ ಕಟ್ಟಡ ಕಡಲಿನ ಅಂಚಿನಲ್ಲಿದ್ದು ಈಗಲೋ ಆಗಲೋ ಎನ್ನುವಂತಿತ್ತು. ಅದರ ಮಾಲಕ ಅಬ್ದುಲ್ಲ ಟಿ. ಎಂಬವರು ಕಟ್ಟಡದ ಬದಿಗೆ ಕಲ್ಲು, ಮರಳು ಮೂಟೆಗಳನ್ನ ಹಾಕಿ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ತೀರ ಪ್ರದೇಶದ ಮೂಲನಿವಾಸಿಗಳ ಮನೆಗಳೇ ಕಡಲಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದರಿಂದ ಜಿಲ್ಲಾಡಳಿತದಿಂದ ಗೆಸ್ಟ್ ಹೌಸ್ ರಕ್ಷಣೆಗೆ ಕಾಮಗಾರಿ ಕೈಗೊಳ್ಳಲು ಸ್ಥಳೀಯರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇದರಿಂದ ರೋಸಿ ಹೋಗಿದ್ದ ಗೆಸ್ಟ್ ಹೌಸ್ ಮಾಲಕ ಕಡಲ್ಕೊರೆತ ವೀಕ್ಷಣೆಗೆ ಬಂದಿದ್ದ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರಲ್ಲಿಯೂ ಅಳಲು ತೋಡಿಕೊಂಡಿದ್ದರು. ಉಳ್ಳಾಲ ತಾಲೂಕು ಕಚೇರಿಗೆ ಕಂಪ್ಯೂಟರ್, ಪೀಠೋಪಕರಣಗಳನ್ನ ನೀಡಿದ್ದರೂ ತಮ್ಮ ಗೆಸ್ಟ್ ಹೌಸನ್ನ ರಕ್ಷಿಸಲು ತಹಶೀಲ್ದಾರ್ ಬಿಡುತ್ತಿಲ್ಲ ಎಂದು ದೂರು ಹೇಳಿದ್ದರು. ಆದರೆ ಮಾಲಕರ ಶತ ಪ್ರಯತ್ನದ ನಡುವೆಯೂ ಕಡಲಿನ ಅಬ್ಬರ ಹೆಚ್ಚುತ್ತಲೇ ಇದ್ದು ಈಗ ಗೆಸ್ಟ್ ಹೌಸ್ ಕಟ್ಟಡದ ಭಾಗಶಃ ನೀರುಪಾಲಾಗಿದೆ. ಸಮುದ್ರರಾಜನ ರಕ್ಕಸ ಅಲೆಗಳು ನುಗ್ಗಿ ಬರುತ್ತಿದ್ದು ಕೆಲವೇ ದಿನಗಳಲ್ಲಿ ಪೂರ್ತಿಯಾಗಿ ನುಂಗಿ ಹಾಕಲಿದೆ.
Guest house in Ullal finally due to soil erosion, administration negligence reason says owners.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 09:31 pm
HK News Desk
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm