ಬ್ರೇಕಿಂಗ್ ನ್ಯೂಸ್
 
            
                        08-08-22 09:42 pm Mangalore Correspondent ಕರಾವಳಿ
 
            ಉಳ್ಳಾಲ, ಆ.8 : ಉಚ್ಚಿಲ, ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ಮತ್ತಷ್ಟು ತೀವ್ರಗೊಂಡಿದ್ದು ಕಡಲ ತೀರದಲ್ಲಿದ್ದ ಗೆಸ್ಟ್ ಹೌಸ್ ಕಟ್ಟಡವೊಂದು ಕಡೆಗೂ ಕಡಲು ಪಾಲಾಗಿದೆ.
ಈ ಬಾರಿಯ ಮಳೆಗಾಲ ಆರಂಭದಲ್ಲೇ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿತ್ತು. ಬೀಚ್ ರಸ್ತೆಯನ್ನೇ ಕಡಲು ನುಂಗಿ ಹಾಕಿದ್ದು ತೀರದಲ್ಲಿರುವ ಬಹುತೇಕ ಮನೆಗಳು, ಗೆಸ್ಟ್ ಹೌಸ್ ಗಳು ಅಪಾದಂಚಿನಲ್ಲಿದ್ದವು. ಆಬಳಿಕ ಬಟ್ಟಪ್ಪಾಡಿ ಪ್ರದೇಶಕ್ಕೆ ಕಡಲ್ಕೊರೆತ ವೀಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರ ದಂಡೇ ಆಗಮಿಸಿತ್ತು.

ಬಟ್ಟಂಪಾಡಿಯಲ್ಲಿ "ವಿಟಮಿನ್ ಸಿ" ಎಂಬ ಹೆಸರಿನ ಅಕ್ರಮ ಗೆಸ್ಟ್ ಹೌಸ್ ಕಟ್ಟಡ ಕಡಲಿನ ಅಂಚಿನಲ್ಲಿದ್ದು ಈಗಲೋ ಆಗಲೋ ಎನ್ನುವಂತಿತ್ತು. ಅದರ ಮಾಲಕ ಅಬ್ದುಲ್ಲ ಟಿ. ಎಂಬವರು ಕಟ್ಟಡದ ಬದಿಗೆ ಕಲ್ಲು, ಮರಳು ಮೂಟೆಗಳನ್ನ ಹಾಕಿ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ತೀರ ಪ್ರದೇಶದ ಮೂಲನಿವಾಸಿಗಳ ಮನೆಗಳೇ ಕಡಲಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದರಿಂದ ಜಿಲ್ಲಾಡಳಿತದಿಂದ ಗೆಸ್ಟ್ ಹೌಸ್ ರಕ್ಷಣೆಗೆ ಕಾಮಗಾರಿ ಕೈಗೊಳ್ಳಲು ಸ್ಥಳೀಯರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇದರಿಂದ ರೋಸಿ ಹೋಗಿದ್ದ ಗೆಸ್ಟ್ ಹೌಸ್ ಮಾಲಕ ಕಡಲ್ಕೊರೆತ ವೀಕ್ಷಣೆಗೆ ಬಂದಿದ್ದ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರಲ್ಲಿಯೂ ಅಳಲು ತೋಡಿಕೊಂಡಿದ್ದರು. ಉಳ್ಳಾಲ ತಾಲೂಕು ಕಚೇರಿಗೆ ಕಂಪ್ಯೂಟರ್, ಪೀಠೋಪಕರಣಗಳನ್ನ ನೀಡಿದ್ದರೂ ತಮ್ಮ ಗೆಸ್ಟ್ ಹೌಸನ್ನ ರಕ್ಷಿಸಲು ತಹಶೀಲ್ದಾರ್ ಬಿಡುತ್ತಿಲ್ಲ ಎಂದು ದೂರು ಹೇಳಿದ್ದರು. ಆದರೆ ಮಾಲಕರ ಶತ ಪ್ರಯತ್ನದ ನಡುವೆಯೂ ಕಡಲಿನ ಅಬ್ಬರ ಹೆಚ್ಚುತ್ತಲೇ ಇದ್ದು ಈಗ ಗೆಸ್ಟ್ ಹೌಸ್ ಕಟ್ಟಡದ ಭಾಗಶಃ ನೀರುಪಾಲಾಗಿದೆ. ಸಮುದ್ರರಾಜನ ರಕ್ಕಸ ಅಲೆಗಳು ನುಗ್ಗಿ ಬರುತ್ತಿದ್ದು ಕೆಲವೇ ದಿನಗಳಲ್ಲಿ ಪೂರ್ತಿಯಾಗಿ ನುಂಗಿ ಹಾಕಲಿದೆ.
 
            
            
            Guest house in Ullal finally due to soil erosion, administration negligence reason says owners.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm