ಬ್ರೇಕಿಂಗ್ ನ್ಯೂಸ್
08-08-22 09:42 pm Mangalore Correspondent ಕರಾವಳಿ
ಉಳ್ಳಾಲ, ಆ.8 : ಉಚ್ಚಿಲ, ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ಮತ್ತಷ್ಟು ತೀವ್ರಗೊಂಡಿದ್ದು ಕಡಲ ತೀರದಲ್ಲಿದ್ದ ಗೆಸ್ಟ್ ಹೌಸ್ ಕಟ್ಟಡವೊಂದು ಕಡೆಗೂ ಕಡಲು ಪಾಲಾಗಿದೆ.
ಈ ಬಾರಿಯ ಮಳೆಗಾಲ ಆರಂಭದಲ್ಲೇ ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಪ್ರದೇಶದಲ್ಲಿ ಕಡಲ್ಕೊರೆತ ತೀವ್ರಗೊಂಡಿತ್ತು. ಬೀಚ್ ರಸ್ತೆಯನ್ನೇ ಕಡಲು ನುಂಗಿ ಹಾಕಿದ್ದು ತೀರದಲ್ಲಿರುವ ಬಹುತೇಕ ಮನೆಗಳು, ಗೆಸ್ಟ್ ಹೌಸ್ ಗಳು ಅಪಾದಂಚಿನಲ್ಲಿದ್ದವು. ಆಬಳಿಕ ಬಟ್ಟಪ್ಪಾಡಿ ಪ್ರದೇಶಕ್ಕೆ ಕಡಲ್ಕೊರೆತ ವೀಕ್ಷಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರ ದಂಡೇ ಆಗಮಿಸಿತ್ತು.

ಬಟ್ಟಂಪಾಡಿಯಲ್ಲಿ "ವಿಟಮಿನ್ ಸಿ" ಎಂಬ ಹೆಸರಿನ ಅಕ್ರಮ ಗೆಸ್ಟ್ ಹೌಸ್ ಕಟ್ಟಡ ಕಡಲಿನ ಅಂಚಿನಲ್ಲಿದ್ದು ಈಗಲೋ ಆಗಲೋ ಎನ್ನುವಂತಿತ್ತು. ಅದರ ಮಾಲಕ ಅಬ್ದುಲ್ಲ ಟಿ. ಎಂಬವರು ಕಟ್ಟಡದ ಬದಿಗೆ ಕಲ್ಲು, ಮರಳು ಮೂಟೆಗಳನ್ನ ಹಾಕಿ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ ತೀರ ಪ್ರದೇಶದ ಮೂಲನಿವಾಸಿಗಳ ಮನೆಗಳೇ ಕಡಲಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದರಿಂದ ಜಿಲ್ಲಾಡಳಿತದಿಂದ ಗೆಸ್ಟ್ ಹೌಸ್ ರಕ್ಷಣೆಗೆ ಕಾಮಗಾರಿ ಕೈಗೊಳ್ಳಲು ಸ್ಥಳೀಯರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಇದರಿಂದ ರೋಸಿ ಹೋಗಿದ್ದ ಗೆಸ್ಟ್ ಹೌಸ್ ಮಾಲಕ ಕಡಲ್ಕೊರೆತ ವೀಕ್ಷಣೆಗೆ ಬಂದಿದ್ದ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರಲ್ಲಿಯೂ ಅಳಲು ತೋಡಿಕೊಂಡಿದ್ದರು. ಉಳ್ಳಾಲ ತಾಲೂಕು ಕಚೇರಿಗೆ ಕಂಪ್ಯೂಟರ್, ಪೀಠೋಪಕರಣಗಳನ್ನ ನೀಡಿದ್ದರೂ ತಮ್ಮ ಗೆಸ್ಟ್ ಹೌಸನ್ನ ರಕ್ಷಿಸಲು ತಹಶೀಲ್ದಾರ್ ಬಿಡುತ್ತಿಲ್ಲ ಎಂದು ದೂರು ಹೇಳಿದ್ದರು. ಆದರೆ ಮಾಲಕರ ಶತ ಪ್ರಯತ್ನದ ನಡುವೆಯೂ ಕಡಲಿನ ಅಬ್ಬರ ಹೆಚ್ಚುತ್ತಲೇ ಇದ್ದು ಈಗ ಗೆಸ್ಟ್ ಹೌಸ್ ಕಟ್ಟಡದ ಭಾಗಶಃ ನೀರುಪಾಲಾಗಿದೆ. ಸಮುದ್ರರಾಜನ ರಕ್ಕಸ ಅಲೆಗಳು ನುಗ್ಗಿ ಬರುತ್ತಿದ್ದು ಕೆಲವೇ ದಿನಗಳಲ್ಲಿ ಪೂರ್ತಿಯಾಗಿ ನುಂಗಿ ಹಾಕಲಿದೆ.
Guest house in Ullal finally due to soil erosion, administration negligence reason says owners.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm