ಬ್ರೇಕಿಂಗ್ ನ್ಯೂಸ್
04-10-20 11:26 am Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 4: ಗೋವುಗಳನ್ನು ಟೆಂಪೋದಲ್ಲಿ ಅಮಾನುಷವಾಗಿ ತುಂಬಿಸಿಕೊಂಡು ಸಾಗಿಸುತ್ತಿದ್ದ ವೇಳೆ ಗೋವುಗಳು ಒಂದೊಂದೇ ರಸ್ತೆಗೆ ಎಸೆಯಲ್ಪಟ್ಟು ಅವಾಂತರ ಸೃಷ್ಟಿಯಾದ ಘಟನೆ ನಗರದಲ್ಲಿ ನಡೆದಿದೆ.
ಸುರತ್ಕಲ್ ಕಡೆಯಿಂದ ನಸುಕಿನ ವೇಳೆ ಅಕ್ರಮವಾಗಿ ಗೋವುಗಳನ್ನು ಕುದ್ರೋಳಿ ಕಸಾಯಿಖಾನೆಯತ್ತ ತರಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಕೊಟ್ಟಾರ ಬಳಿ ತಡೆಯಲು ಯತ್ನಿಸಿದ್ದಾರೆ. ಆದರೆ, ಕಾರ್ಯಕರ್ತರನ್ನು ಲೆಕ್ಕಿಸದೆ ಟೆಂಪೋ ವೇಗವಾಗಿ ಧಾವಿಸಿದ್ದು ಈ ವೇಳೆ ಅಪಾಯಕಾರಿಯಾಗಿ ತುಂಬಿಸಿದ್ದ ಗೋವುಗಳು ಹಿಂಭಾಗದ ಬಾಗಿಲು ಓಪನ್ ಆಗಿ ರಸ್ತೆಗೆ ಎಸೆಯಲ್ಪಟ್ಟಿದೆ. ಕೊಟ್ಟಾರ, ಕುಂಟಿಕಾನ ಜಂಕ್ಷನ್, ಮಣ್ಣಗುಡ್ಡೆ ಬಳಿ ಒಂಬತ್ತು ಗೋವುಗಳು ಹೀಗೆ ರಸ್ತೆಗೆ ಬಿದ್ದು ನರಳಾಡಿವೆ. ಇಷ್ಟಾದರೂ, ಆರೋಪಿಗಳು ಟೆಂಪೋವನ್ನು ನಿಲ್ಲಿಸದೆ ಪರಾರಿಯಾಗಿದ್ದಾರೆ.
ಕೊನೆಗೆ, ಬಜರಂಗದಳ ಕಾರ್ಯಕರ್ತರು ಮಣ್ಣಗುಡ್ಡೆ ಬಳಿ ರಸ್ತೆಗೆ ಬಿದ್ದ ಗೋವುಗಳನ್ನು ರಸ್ತೆಯಲ್ಲೇ ಕಟ್ಟಿ ಪ್ರತಿಭಟನೆ ನಡೆಸಿದ್ದಾರೆ. ಕಾರ್ಯಕರ್ತರು ಬೆಳ್ಳಂಬೆಳಗ್ಗೆ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ಸ್ಥಳಕ್ಕಾಗಮಿಸಿದ ಬರ್ಕೆ ಠಾಣೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.
ಟೆಂಪೋವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಬೇಕು, ಅದರಲ್ಲಿದ್ದ 30ಕ್ಕೂ ಹೆಚ್ಚು ಗೋವುಗಳನ್ನು ವಶಕ್ಕೆ ಪಡೆಯಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬಳಿಕ ಪೊಲೀಸರು ಟೆಂಪೋ ಮತ್ತು ಅದರಲ್ಲಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಅಲ್ಲಲ್ಲಿ ರಸ್ತೆಗೆ ಬಿದ್ದ ಒಂಬತ್ತು ಗೋವುಗಳನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ಇರಿಸಿದ್ದಾರೆ.
ಹೀಗೆ ನೆಲಕ್ಕೆ ಬಿದ್ದ ಗೋವುಗಳಲ್ಲಿ ಹೆಚ್ಚಿನವು ಸಣ್ಣ ಪ್ರಾಯದ ಕರುಗಳು. ಕರುಗಳನ್ನು ಮಾಂಸ ಮಾಡಿ, ಮಟನ್ ಜೊತೆಗೆ ಬೆರೆಸುತ್ತಾರೆಂಬ ದೂರುಗಳಿವೆ. ಇದೇ ಕಾರಣಕ್ಕೆ ಗಂಡು ಕರುಗಳಿಗೆ ಭಾರೀ ಬೇಡಿಕೆ ಇದೆ. ನಿಯಮಿತವಾಗಿ ಮಟನ್ ಪೂರೈಕೆ ಆಗುವಲ್ಲಿ ಕರುಗಳ ಮಾಂಸವನ್ನು ಮಿಕ್ಸ್ ಮಾಡಲಾಗುತ್ತಿದೆ ಎನ್ನುವ ವಿಚಾರವನ್ನು ಅಲ್ಲಿನ ವ್ಯಾಪಾರಿಗಳೇ ಹೇಳುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಆಹಾರ ಇಲಾಖೆ ಅಧಿಕಾರಿಗಳು ತಪಾಸಣೆಗೆ ಬರದೇ ಇರುವುದು ದಂಧೆಕೋರರಿಗೆ ಭಯ ಇಲ್ಲದಾಗಿದೆ. ದಿನವೂ ನಸುಕಿನ ವೇಳೆ ಅಕ್ರಮ ಗೋಸಾಗಾಟ ನಡೆಯುತ್ತಿದ್ದರೂ, ಕಡಿವಾಣ ಇಲ್ಲದಾಗಿದೆ.
19-09-24 08:42 pm
Bangalore Correspondent
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
BJP MLA Munirathna, Rape Case; ಜಾತಿ ನಿಂದನೆ ಕೇ...
19-09-24 11:37 am
19-09-24 11:42 am
HK News Desk
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
19-09-24 09:08 pm
Mangalore Correspondent
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
Mangalore Mayor elections 2024: ಮಂಗಳೂರು ಮಹಾನಗ...
18-09-24 10:45 pm
Mangalore, Lawrence D’Souza, congress Labour...
18-09-24 10:29 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm