ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.


ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm