ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.


ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm