ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.
ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm