ಬ್ರೇಕಿಂಗ್ ನ್ಯೂಸ್
12-08-22 02:46 pm Mangalore Correspondent ಕರಾವಳಿ
ಉಳ್ಳಾಲ, ಆ.12: ಬೆಳಗ್ಗಿನಿಂದ ಮನೆಯಿಂದ ನಾಪತ್ತೆಯಾಗಿದ್ದ ಉಳ್ಳಾಲದ ಶಿಕ್ಷಕಿಯೋರ್ವರ ಮೃತದೇಹ ಇಂದು ಮಧ್ಯಾಹ್ನ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.
ಉಳ್ಳಾಲದ ಅಬ್ಬಕ್ಕ ಸರ್ಕಲ್ ನಲ್ಲಿ ಲಿಟಲ್ ಹಾರ್ಟ್ ಕಿಂಡರ್ ಗಾರ್ಟನ್ ಸಂಸ್ಥೆಯ ಮಾಲಕಿ ಮತ್ತು ಶಿಕ್ಷಕಿಯೂ ಆಗಿರುವ ಹರಿಣಾಕ್ಷಿ ಬಸವರಾಜ್ (51)ಮೃತ ದುರ್ದೈವಿ. ಹರಿಣಾಕ್ಷಿ ಅವರ ಪತಿ ಬಸವರಾಜ್ ಅವರು ನ್ಯಾಯವಾದಿಯಾಗಿದ್ದು ಶಿವಮೊಗ್ಗದಲ್ಲಿದ್ದಾರೆ. ಹರಿಣಾಕ್ಷಿ ಅವರು ತನ್ನ ಇಬ್ಬರು ಪುತ್ರರೊಂದಿಗೆ ಅಬ್ಬಕ್ಕ ಸರ್ಕಲ್ ನಲ್ಲಿ ನೆಲೆಸಿದ್ದರು. ಮನೆಯ ಕಟ್ಟಡದಲ್ಲೇ ನರ್ಸರಿ, ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಇತರೇ ಸಿಬ್ಬಂದಿಗಳ ಜೊತೆ ಶಿಕ್ಷಣ, ಟ್ಯೂಷನ್ ನೀಡುತ್ತಿದ್ದರು. ಹರಿಣಾಕ್ಷಿ ಅವರ ಹಿರಿಯ ಪುತ್ರ ನಿತಿನ್ ರಾಜ್ ಇನ್ಫೋಸಿಸ್ ಸಂಸ್ಥೆಯಲ್ಲಿ ಇಂಜಿನಿಯರ್ ಆಗಿದ್ದು ಕಿರಿಯ ಪುತ್ರ ಅಮಿತ್ ರಾಜ್ ಎಲೋಶಿಯಸ್ ಕಾಲೇಜಲ್ಲಿ ಬಿಬಿಎ ದ್ವಿತೀಯ ವರ್ಷ ವ್ಯಾಸಂಗ ನಡೆಸುತ್ತಿದ್ದಾನೆ.



ಹರಿಣಾಕ್ಷಿ ಅವರ ಪುತ್ರರು ಇಂದು ಬೆಳಗ್ಗೆ ಎದ್ದಾಗ ತಾಯಿ ಮನೆಯಲ್ಲಿ ಇರಲಿಲ್ಲವಂತೆ. ಗಾಬರಿಗೊಂಡ ಮಕ್ಕಳು ತಾಯಿಗಾಗಿ ಹುಡುಕಾಟ ನಡೆಸಿದ್ದು ಕೊನೆಗೆ ಉಳ್ಳಾಲ ಪೊಲೀಸರಿಗೂ ವಿಷಯ ತಿಳಿಸಿದ್ದಾರೆ. ಮಧ್ಯಾಹ್ನದ ವೇಳೆ ಸಮುದಾಯ ಆರೋಗ್ಯ ಕೇಂದ್ರದ ಬಾವಿ ಬಳಿ ಹರಿಣಾಕ್ಷಿ ಅವರು ಧರಿಸುತ್ತಿದ್ದ ಚಪ್ಪಲಿ ದೊರಕಿದೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯ ಈಜು ರಕ್ಷಕರು ಸೇರಿ ಬಾವಿಯೊಳಗಿದ್ದ ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಹರಿಣಾಕ್ಷಿ ಅವರು ಹಣಕಾಸಿನ ವಿಚಾರದಲ್ಲಿ ಸದೃಢರಾಗಿದ್ದು ಕೊರೊನಾ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಿಗೆ ಜಾತಿ, ಮತ ನೋಡದೆ ಆಹಾರ ಸಾಮಾಗ್ರಿಗಳನ್ನ ನೀಡಿದ್ದರಂತೆ. ದಿನ ನಿತ್ಯವೂ ನಸುಕಿನ ವೇಳೆ ಅವರು ವಾಕಿಂಗ್ ನಡೆಸುತ್ತಿದ್ದು ನಿನ್ನೆ ಬೆಳಗ್ಗೆಯೂ ವಾಕಿಂಗ್ ಹೋಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ಸಂಜೆ ತಲೆನೋವು ಕಾರಣದಿಂದ ಸುಸ್ತಾಗಿದ್ದರೆಂದು ಪರಿಚಯಸ್ಥರು ತಿಳಿಸಿದ್ದಾರೆ.
Kinder garden school owners Body found in Health department well at Ullal in Mangalore, suicide suspected. The deceased woman has been identified as Harinakshi (51). The reason for her extreme step is still unknown. Her husband is said to be a lawyer by profession. She was the owner of a kinder garden school in Ullal.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 08:44 pm
HK News Staffer
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm