ಬ್ರೇಕಿಂಗ್ ನ್ಯೂಸ್
13-08-22 05:29 pm Mangalore Correspondent ಕರಾವಳಿ
ಉಳ್ಳಾಲ, ಆ.13: ಓವರ್ ಸ್ಪೀಡ್ ಆರೋಪದಡಿ ಕೇಸು ದಾಖಲಿಸಿದರೂ, ದಂಡ ಕಟ್ಟದ ಸಿಟಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ವಿರೋಧಿಸಿ ಬಸ್ಸು ನೌಕರರು ತಲಪಾಡಿ ರೂಟ್ ನಲ್ಲಿ ಬಸ್ ಮುಷ್ಕರ ನಡೆಸಿದ್ದು, ಚಾಲಕನ ಬಿಡುಗಡೆ ಆಗುತ್ತಿದ್ದಂತೆ ಸಂಜೆ ಹೊತ್ತಿಗೆ ಮುಷ್ಕರ ಕೈಬಿಟ್ಟು ಟ್ರಾಫಿಕ್ ಎಎಸ್ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇಂದು ಬೆಳಗ್ಗೆ 42 ರೂಟ್ ನಂಬರಿನ ಉಷಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ಮೇಲಿನ ತಲಪಾಡಿಯಲ್ಲಿ ಗಸ್ತಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಸೈ ರಾಬರ್ಟ್ ಲಸ್ರಾದೊ ತಡೆದಿದ್ದರು. ಓವರ್ ಸ್ಪೀಡ್ ಕಾರಣವೊಡ್ಡಿ 1000 ರೂ. ದಂಡ ಕಟ್ಟುವಂತೆ ಬಸ್ ನಿರ್ವಾಹಕ ದಯಾನಂದ್ ಅವರನ್ನ ಪೀಡಿಸಿದ್ದರು. ಚೆಕ್ ಪೋಸ್ಟ್ ಇದ್ದ ಪ್ರದೇಶದಲ್ಲಿ ಹೇಗೆ ಸ್ಪೀಡ್ ಬರಲು ಸಾಧ್ಯ ಎಂದು ನಿರ್ವಾಹಕರು ಪ್ರಶ್ನೆ ಮಾಡಿದ್ದರು. ಕೊನೆಗೆ ಎಎಸ್ಸೈ 500 ರೂ. ದಂಡ ಕಟ್ಟುವಂತೆ ಒತ್ತಡ ಹೇರಿದ್ದು, ದಂಡ ಪಾವತಿಸಲು ನಿರ್ವಾಹಕ ನಿರಾಕರಿಸಿದ್ದರು. ಅದೇ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಎಸ್ಐ, ಬಸ್ ಚಾಲಕ ಅಭಿರಾಜ್ ಅವರನ್ನ ಉಳ್ಳಾಲ ಪೊಲೀಸರನ್ನು ಕರೆಸಿ ವಶಕ್ಕೆ ಪಡೆಯುವಂತೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಬಸ್ ನೌಕರರು ದಿಢೀರ್ ಆಗಿ ತಲಪಾಡಿ ರೂಟ್ ಬಸ್ಸುಗಳನ್ನೆಲ್ಲ ನಿಲ್ಲಿಸಿ ಮುಷ್ಕರ ನಡೆಸಿದರು.


ಈ ಮಧ್ಯೆ ದ.ಕ. ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅವರು ಉಳ್ಳಾಲ ಠಾಣಾಧಿಕಾರಿಯಲ್ಲಿ ವಶಕ್ಕೆ ಪಡೆದ ಬಸ್ ಚಾಲಕ ಅಭಿರಾಜ್ ಅವರನ್ನ ಬಿಡುಗಡೆ ಮಾಡುವಂತೆ ಮಾತುಕತೆ ನಡೆಸಿದ್ದಾರೆ. ಪೊಲೀಸರು ಮುಚ್ಚಳಿಕೆ ಬರೆಸಿ ಚಾಲಕ ಅಭಿರಾಜ್ ಅವರನ್ನು ಬಿಡುಗಡೆ ಮಾಡುತ್ತಿದ್ದಂತೆ ಬಸ್ಸು ನೌಕರರು ಮುಷ್ಕರ ಕೈ ಬಿಟ್ಟು ಬಸ್ ಸ್ಟೇರಿಂಗ್ ತಿರುಗಿಸಿದ್ದಾರೆ.


ಮುಷ್ಕರ ಹಿಂತೆಗೆಯುವ ಮುನ್ನ ಸಿಟಿ ಬಸ್ಸುಗಳಿಗೆ ನಿರಂತರ ಉಪಟಳ ನೀಡುತ್ತಿರುವ ಎಎಸ್ಐ ಲಸ್ರಾದೊ ವಿರುದ್ಧ ಕ್ರಮಕ್ಕೆ ಆಗ್ರಹಿಸುವಂತೆ ಬಸ್ಸು ನೌಕರರು ಜಯಶೀಲ ಅಡ್ಯಂತಾಯ ಅವರಲ್ಲಿ ಕೇಳಿಕೊಂಡಿದ್ದಾರೆ. ಟ್ರಾಫಿಕ್ ಎಎಸ್ಸೈ ಬಗ್ಗೆ ಬಸ್ ಸಿಬಂದಿ ಕಡೆಯಿಂದ ನಿರಂತರ ದೂರುಗಳು ಬರುತ್ತಿದ್ದು ಟ್ರಾಫಿಕ್ ಹಿರಿಯ ಪೊಲೀಸ್ ಅಧಿಕಾರಿಗಳಲ್ಲಿ ಈ ಬಗ್ಗೆ ದೂರು ಹೇಳುವುದಾಗಿ ಅಡ್ಯಂತಾಯ ಅವರು ಹೇಳಿದ್ದಾರೆ.
Bus driver taken to custody over speed, released, bus resume service at Talapady at Ullal in Mangalore.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am