ಬ್ರೇಕಿಂಗ್ ನ್ಯೂಸ್
05-10-20 12:38 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05 : ಈ ಬಾರಿ ಕೃಷ್ಣಾಷ್ಟಮಿ, ಗಣೇಶೋತ್ಸವಕ್ಕೆ ಕೊರೊನಾ ನಿರ್ಬಂಧ ನೆಪದಲ್ಲಿ ಆಚರಣೆಗೆ ಅವಕಾಶ ನೀಡಿರದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಸರಾ ಉತ್ಸವಕ್ಕೆ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ದೇವಸ್ಥಾನಗಳಲ್ಲಿ ಆಚರಿಸಲು ಅವಕಾಶ ನೀಡಿದೆ.
ದೇವಸ್ಥಾನಗಳಲ್ಲಿ ದಸರಾ ಹಬ್ಬದ ನಿಮಿತ್ತ ಶಾರದಾ ವಿಗ್ರಹ ಸ್ಥಾಪನೆ ಮಾಡಿದರೂ ಹೆಚ್ಚಿನ ಜನ ಸೇರಲು ಅವಕಾಶ ಇಲ್ಲ. ಯಾವುದೇ ತರಹದ ಸಭೆ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇರಲ್ಲ. ಅಲ್ಲದೆ, ಹುಲಿವೇಷ ತಂಡಕ್ಕೂ ಅವಕಾಶ ನೀಡದಿರಲು ಜಿಲ್ಲಾ ಧಾರ್ಮಿಕ ಪರಿಷತ್ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ದಸರಾ ಹಬ್ಬ ನೆಪದಲ್ಲಿ ಜನಸಂದಣಿ ಸೇರುವಂತಿಲ್ಲ. ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕಾೃನಿಂಗ್, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ನಿಯಮಗಳನ್ನು ಜಾರಿಗೆ ತರಲು ಸ್ವಯಂಸೇವಕರನ್ನು ಬಳಸಿಕೊಳ್ಳಬೇಕು. ದೇವಸ್ಥಾನದ ಒಳಗೆ ಸಾಮಾಜಿಕ ಅಂತರ ಕಾಪಾಡಲು ಕುರ್ಚಿಗಳನ್ನು ಇರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮ ನೇರಪ್ರಸಾರ ಮಾಡಿ, ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ದೊಡ್ಡ ಗಾತ್ರದ ಶಾಮಿಯಾನ, ಚಪ್ಪರ ಹಾಕಲು ಅವಕಾಶ ನೀಡದಂತೆ ಎಲ್ಲಾ ದೇವಸ್ಥಾನಗಳಿಗೆ ಸೂಚಿಸುವ ನಿಟ್ಟಿನಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಇಷ್ಟೇ ಅಲ್ಲದೆ ಹಬ್ಬದಲ್ಲಿ ಅಂಗಡಿ ವ್ಯಾಪಾರಕ್ಕೆ ಕೂಡ ಅವಕಾಶ ನೀಡಲಾಗಿಲ್ಲ.

ಇದೇ ವೇಳೆ ಮುಂಬರುವ ದೀಪಾವಳಿ ಹಬ್ಬವನ್ನೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೀಪಾವಳಿಗೆ ಸುಡುಮದ್ದು/ಪಟಾಕಿ ಶೇಖರಣೆ, ಮಾರಾಟ ಹಾಗೂ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಈ ಸಭೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕೆ.ಸೂರ್ಯ ಕಶೆಕೋಡಿ, ಸೂರ್ಯನಾರಾಯಣ ಭಟ್, ಹಾಗೂ ವಿವಿಧ ದೇವಸ್ಥಾನಗಳ ಆಡಳಿತ ಮುಖ್ಯಸ್ಥರು ಉಪಸ್ಥಿತರಿದ್ದರು.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm