ಬ್ರೇಕಿಂಗ್ ನ್ಯೂಸ್
18-08-22 10:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಶ್ರೀಕೃಷ್ಣ ಜನ್ಮಾಷ್ಟಮಿಗೆ ತುಳು ಚಿತ್ರತಂಡವೊಂದು ವಿಶಿಷ್ಟ ರೀತಿಯಲ್ಲಿ ಶುಭ ಹಾರೈಸಲು ಹೋಗಿ ಹಿಂದುಗಳ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಭಾರೀ ಸದ್ದು ಮಾಡಿದ ರಾಜ್ ಸೌಂಡ್ಸ್ ಅಂಡ್ ಲೈಟ್ಸ್ ಚಿತ್ರದ ಯಶಸ್ಸಿನಿಂದ ಬೀಗುತ್ತಿರುವ ಆರ್ ಜೆ ವಿನೀತ್ ಮುಖ್ಯ ಭೂಮಿಕೆಯಲ್ಲಿ ಮತ್ತೊಂದು ಚಿತ್ರ ತಯಾರಾಗುತ್ತಿದ್ದು, ಅದರ ಟೈಟಲ್ ಲಾಂಚ್ ವೇಳೆಯಲ್ಲೇ ಎಡವಟ್ಟು ಮಾಡಿಕೊಂಡಿದೆ.
ಪುಳಿಮುಂಚಿ ಎನ್ನುವ ಹೆಸರಿನ ಹೊಸ ಚಿತ್ರದ ಟೈಟಲ್ ಲಾಂಚ್ ಇಂದು ಆಗಿದೆ ಎನ್ನಲಾಗುತ್ತಿದ್ದು, ಅದರ ನಂತರ ಕೃಷ್ಣಾಷ್ಟಮಿಯ ಪ್ರಯುಕ್ತ ವಿಶಿಷ್ಟವಾಗಿ ಶುಭ ಹಾರೈಸಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿತ್ತು. ಆರ್ ಜೆ ವಿನೀತ್ ಅವರನ್ನು ಕೃಷ್ಣನ ರೀತಿ ತೋರಿಸಿ, ಶ್ರೀಕೃಷ್ಣನ ಸಂದೇಶವನ್ನೇ ತಿರುಚಿ ಅದರಲ್ಲಿ ಕೊಟ್ಟಿರುವುದು ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ. ಪೋಸ್ಟರ್ ಮೇಲ್ಭಾಗದಲ್ಲಿ ಶ್ರೀಕೃಷ್ಣನ ಸಂದೇಶವನ್ನು ತಿರುಚಿ, ಹಾಸ್ಯ ಸಂಸ್ಥಾಪನಾರ್ಥಾಯ ಸಂಭವಾಮಿ ಪದೇ ಪದೇ ಎಂದು ಬರೆಯುವ ಮೂಲಕ ಕೃಷ್ಣನ ಭಗವದ್ಗೀತೆಯ ಶ್ಲೋಕವನ್ನೇ ಅಣಕಿಸಿದೆ.


ಇದರ ಬಗ್ಗೆ ಖಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದ್ದು, ಹಲವು ಪೋಸ್ಟ್ ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಚಿತ್ರತಂಡ ಕ್ಷಮೆ ಯಾಚಿಸದೇ ಇದ್ದಲ್ಲಿ ಚಿತ್ರವನ್ನು ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಬಾಲಿವುಡ್ಡಿನಲ್ಲೇ ಹಿಂದುಗಳನ್ನು, ಹಿಂದು ದೇವರನ್ನು ಅಣಕಿಸಿದ ಚಿತ್ರಕ್ಕೆ ಬಹಿಷ್ಕಾರ ಹಾಕಲಾಗಿದೆ. ತುಳು ಚಿತ್ರತಂಡಕ್ಕೂ ಅದೇ ರೀತಿಯ ಬಹಿಷ್ಕಾರ ಹಾಕಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿದೆ. ರಾಜ್ ಸೌಂಡ್ಸ್ ಅಂಡ್ ಲೈಟ್ಸ್ ಯಶಸ್ಸಿನಿಂದಾಗಿ ಮತ್ತೊಂದು ಹಾಸ್ಯ ಪ್ರಧಾನ ಚಿತ್ರವನ್ನು ವಿನೀತನ್ನೇ ಪ್ರಮುಖವಾಗಿಟ್ಟುಕೊಂಡು ತೆರೆಗೆ ತರಲು ಚಿತ್ರತಂಡ ರೆಡಿಯಾಗಿದ್ದರೆ, ಆರಂಭದಲ್ಲೇ ಎಡವಟ್ಟು ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.
Mangalore Pulimunchi tulu movie poster creates controversy and spark on social media with the changes made in krishna sloka.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm