ಬ್ರೇಕಿಂಗ್ ನ್ಯೂಸ್
18-08-22 10:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 18: ಶ್ರೀಕೃಷ್ಣ ಜನ್ಮಾಷ್ಟಮಿಗೆ ತುಳು ಚಿತ್ರತಂಡವೊಂದು ವಿಶಿಷ್ಟ ರೀತಿಯಲ್ಲಿ ಶುಭ ಹಾರೈಸಲು ಹೋಗಿ ಹಿಂದುಗಳ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಭಾರೀ ಸದ್ದು ಮಾಡಿದ ರಾಜ್ ಸೌಂಡ್ಸ್ ಅಂಡ್ ಲೈಟ್ಸ್ ಚಿತ್ರದ ಯಶಸ್ಸಿನಿಂದ ಬೀಗುತ್ತಿರುವ ಆರ್ ಜೆ ವಿನೀತ್ ಮುಖ್ಯ ಭೂಮಿಕೆಯಲ್ಲಿ ಮತ್ತೊಂದು ಚಿತ್ರ ತಯಾರಾಗುತ್ತಿದ್ದು, ಅದರ ಟೈಟಲ್ ಲಾಂಚ್ ವೇಳೆಯಲ್ಲೇ ಎಡವಟ್ಟು ಮಾಡಿಕೊಂಡಿದೆ.
ಪುಳಿಮುಂಚಿ ಎನ್ನುವ ಹೆಸರಿನ ಹೊಸ ಚಿತ್ರದ ಟೈಟಲ್ ಲಾಂಚ್ ಇಂದು ಆಗಿದೆ ಎನ್ನಲಾಗುತ್ತಿದ್ದು, ಅದರ ನಂತರ ಕೃಷ್ಣಾಷ್ಟಮಿಯ ಪ್ರಯುಕ್ತ ವಿಶಿಷ್ಟವಾಗಿ ಶುಭ ಹಾರೈಸಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿತ್ತು. ಆರ್ ಜೆ ವಿನೀತ್ ಅವರನ್ನು ಕೃಷ್ಣನ ರೀತಿ ತೋರಿಸಿ, ಶ್ರೀಕೃಷ್ಣನ ಸಂದೇಶವನ್ನೇ ತಿರುಚಿ ಅದರಲ್ಲಿ ಕೊಟ್ಟಿರುವುದು ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ. ಪೋಸ್ಟರ್ ಮೇಲ್ಭಾಗದಲ್ಲಿ ಶ್ರೀಕೃಷ್ಣನ ಸಂದೇಶವನ್ನು ತಿರುಚಿ, ಹಾಸ್ಯ ಸಂಸ್ಥಾಪನಾರ್ಥಾಯ ಸಂಭವಾಮಿ ಪದೇ ಪದೇ ಎಂದು ಬರೆಯುವ ಮೂಲಕ ಕೃಷ್ಣನ ಭಗವದ್ಗೀತೆಯ ಶ್ಲೋಕವನ್ನೇ ಅಣಕಿಸಿದೆ.


ಇದರ ಬಗ್ಗೆ ಖಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದ್ದು, ಹಲವು ಪೋಸ್ಟ್ ಗಳನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಚಿತ್ರತಂಡ ಕ್ಷಮೆ ಯಾಚಿಸದೇ ಇದ್ದಲ್ಲಿ ಚಿತ್ರವನ್ನು ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಬಾಲಿವುಡ್ಡಿನಲ್ಲೇ ಹಿಂದುಗಳನ್ನು, ಹಿಂದು ದೇವರನ್ನು ಅಣಕಿಸಿದ ಚಿತ್ರಕ್ಕೆ ಬಹಿಷ್ಕಾರ ಹಾಕಲಾಗಿದೆ. ತುಳು ಚಿತ್ರತಂಡಕ್ಕೂ ಅದೇ ರೀತಿಯ ಬಹಿಷ್ಕಾರ ಹಾಕಬೇಕಾದೀತು ಎಂದು ಎಚ್ಚರಿಕೆ ನೀಡಲಾಗಿದೆ. ರಾಜ್ ಸೌಂಡ್ಸ್ ಅಂಡ್ ಲೈಟ್ಸ್ ಯಶಸ್ಸಿನಿಂದಾಗಿ ಮತ್ತೊಂದು ಹಾಸ್ಯ ಪ್ರಧಾನ ಚಿತ್ರವನ್ನು ವಿನೀತನ್ನೇ ಪ್ರಮುಖವಾಗಿಟ್ಟುಕೊಂಡು ತೆರೆಗೆ ತರಲು ಚಿತ್ರತಂಡ ರೆಡಿಯಾಗಿದ್ದರೆ, ಆರಂಭದಲ್ಲೇ ಎಡವಟ್ಟು ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.
Mangalore Pulimunchi tulu movie poster creates controversy and spark on social media with the changes made in krishna sloka.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm