ಬ್ರೇಕಿಂಗ್ ನ್ಯೂಸ್
05-10-20 02:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05: ಪ್ರಸಿದ್ಧ ಮಂಗಳೂರು ದಸರಾ ಉತ್ಸವವನ್ನು ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ನಡೆಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ನಿರ್ಧರಿಸಿದೆ.
ದಸರಾ ಉತ್ಸವ ಆಚರಣೆ ಕುರಿತು ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಆಹ್ವಾನಿತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಮಂಗಳೂರು ದಸರಾವನ್ನು ಕೊರೊನಾದಿಂದಾಗಿ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ‘ನಮ್ಮ ದಸರಾ - ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯ ಮುಂದಿಟ್ಟು ಉತ್ಸವ ಆಚರಿಸಲಾಗುವುದು ಎಂದು ಹೇಳಿದರು.
ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಎಲ್ಲ ಭಕ್ತರಿಗೆ ಮಾಸ್ಕ್ ಕಡ್ಡಾಯಗೊಳಿಸಿ, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ಗೆ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಪ್ರತಿನಿತ್ಯ 150ರಿಂದ 200 ಜನರ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.
ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಮಾತನಾಡಿ, ಪೂಜೆ, ಪ್ರಸಾದ ವಿತರಣೆ, ಮಕ್ಕಳು, ಹಿರಿಯರ ಸುರಕ್ಷತೆ ಸೇರಿ ಪ್ರತಿ ವಿಚಾರ ಗಮನದಲ್ಲಿಟ್ಟು ಕ್ಷೇತ್ರದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳಲಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಂತೆ ದಸರಾ ಮಹೋತ್ಸವ ನಡೆಯಲಿದೆ. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಜೊತೆಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ಉತ್ಸವ ನಡೆಸಲಾಗುವುದು. ಆದರೆ ಈ ಬಾರಿ ದಸರಾ ಮೆರವಣಿಗೆ ಇರುವುದಿಲ್ಲ ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರ್ ಮಾತನಾಡಿ, ಕರೊನಾ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆ ನಡೆಸುವುದು ಅನಿವಾರ್ಯ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.
ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕರ್ಕೇರ ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm