ಬ್ರೇಕಿಂಗ್ ನ್ಯೂಸ್
05-10-20 02:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05: ಪ್ರಸಿದ್ಧ ಮಂಗಳೂರು ದಸರಾ ಉತ್ಸವವನ್ನು ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ನಡೆಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ನಿರ್ಧರಿಸಿದೆ.
ದಸರಾ ಉತ್ಸವ ಆಚರಣೆ ಕುರಿತು ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಆಹ್ವಾನಿತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಮಂಗಳೂರು ದಸರಾವನ್ನು ಕೊರೊನಾದಿಂದಾಗಿ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ‘ನಮ್ಮ ದಸರಾ - ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯ ಮುಂದಿಟ್ಟು ಉತ್ಸವ ಆಚರಿಸಲಾಗುವುದು ಎಂದು ಹೇಳಿದರು.
ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಎಲ್ಲ ಭಕ್ತರಿಗೆ ಮಾಸ್ಕ್ ಕಡ್ಡಾಯಗೊಳಿಸಿ, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ಗೆ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಪ್ರತಿನಿತ್ಯ 150ರಿಂದ 200 ಜನರ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.
ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಮಾತನಾಡಿ, ಪೂಜೆ, ಪ್ರಸಾದ ವಿತರಣೆ, ಮಕ್ಕಳು, ಹಿರಿಯರ ಸುರಕ್ಷತೆ ಸೇರಿ ಪ್ರತಿ ವಿಚಾರ ಗಮನದಲ್ಲಿಟ್ಟು ಕ್ಷೇತ್ರದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳಲಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಂತೆ ದಸರಾ ಮಹೋತ್ಸವ ನಡೆಯಲಿದೆ. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಜೊತೆಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ಉತ್ಸವ ನಡೆಸಲಾಗುವುದು. ಆದರೆ ಈ ಬಾರಿ ದಸರಾ ಮೆರವಣಿಗೆ ಇರುವುದಿಲ್ಲ ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರ್ ಮಾತನಾಡಿ, ಕರೊನಾ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆ ನಡೆಸುವುದು ಅನಿವಾರ್ಯ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.
ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕರ್ಕೇರ ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm