ಬ್ರೇಕಿಂಗ್ ನ್ಯೂಸ್
19-08-22 07:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19 : ಸಾವರ್ಕರ್ ಬಗ್ಗೆ ಕಾಂಗ್ರೆಸ್ ಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರ ಇರೋದು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಾವೆಲ್ಲೂ ಹೇಳಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಅವರನ್ನು ಅಂಡಮಾನ್ ಜೈಲಿಗೆ ಹಾಕಿದ್ದರು ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದಿದ್ದಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಹಾಗೆ ಜೈಲಿನಿಂದ ಹೊರಬಂದಿದ್ದ ಸಾವರ್ಕರ್, ಸ್ವಾತಂತ್ರ್ಯಕ್ಕಾಗಿ ಆನಂತರ ಹೋರಾಡಲಿಲ್ಲ. 1924ರ ನಂತರ ಸಾವರ್ಕರ್ ದೇಶಕ್ಕಾಗಿ ಹೋರಾಟ ಮಾಡಿದ ಉದಾಹರಣೆ ಇದೆಯಾ ? ಆಬಳಿಕ ಸಾವರ್ಕರ್ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. ಈ ಬಗ್ಗೆ ಮಾತ್ರ ಕಾಂಗ್ರೆಸ್ ಪ್ರಶ್ನೆ ಇರುವುದು. ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೂ ಇದನ್ನು ಮಾತ್ರ ಎಂದು ಹೇಳಿದರು.

ಹಾಗೆಂದು, ಸಿದ್ದರಾಮಯ್ಯ ಯಾರಿಗೂ ಆಕ್ರೋಶ ಬರುವಂತೆ ಹೇಳಿಕೆಯನ್ನು ಕೊಟ್ಟಿಲ್ಲ. ಬ್ಯಾನರ್ ಹಾಕಿದ್ದಕ್ಕೆ ಆಕ್ಷೇಪ ಮಾಡಿಲ್ಲ. ಆದರೆ ಬ್ಯಾನರ್ ಹಾಕಿದ್ದವರ ಉದ್ದೇಶದ ಬಗ್ಗೆ ಮಾತಾಡಿದ್ದರು. ಯಾರು ಯಾರ ಬ್ಯಾನರ್ ಹಾಕಿದ್ರೂ ಮೂರನೇ ವ್ಯಕ್ತಿ ತೆಗೆಯುವಂತಿಲ್ಲ. ಯಾರು ಕೂಡ ಆಯಾ ಆಡಳಿತದಿಂದ ಅನುಮತಿ ಪಡೆದು ಬ್ಯಾನರ್ ಹಾಕಬಹುದು. ಬ್ಯಾನರ್ ಹಾಕುವವರು ಉತ್ತಮ ಉದ್ದೇಶದಿಂದ ಹೊಂದಿರಬೇಕು ಅಷ್ಟೇ. ಉದ್ದೇಶ, ದುರುದ್ದೇಶ ಎರಡನ್ನೂ ಇಲ್ಲಿ ಗಮನಿಸಬೇಕು ಎಂದು ಯು.ಟಿ ಖಾದರ್ ಹೇಳಿದರು.
ಆದರೆ ಮಡಿಕೇರಿಯಲ್ಲಿ ಆಗಿರುವ ಘಟನೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ವಿಪಕ್ಷ ನಾಯಕರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಜವಾಬ್ದಾರಿ. ಬಿಜೆಪಿ ಆಡಳಿತದಲ್ಲಿ ಪೊಲೀಸ್ ಇಲಾಖೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ರಾಜಕೀಯ ಪಕ್ಷದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯವನ್ನು ಕೋಮುವಾದಿಗಳ ಮತ್ತು ಗೂಂಡಾಗಳ ಕೈಯಲ್ಲಿ ಕೊಟ್ಟು ಸರ್ಕಾರ ಮೌನವಾಗಿ ಕುಳಿತಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
Mangalore Congress party has never said Savarkar is not a freedom fighter says MLA UT Khader
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm