ಬ್ರೇಕಿಂಗ್ ನ್ಯೂಸ್
19-08-22 07:43 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19 : ಸಾವರ್ಕರ್ ಬಗ್ಗೆ ಕಾಂಗ್ರೆಸ್ ಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರ ಇರೋದು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಾವೆಲ್ಲೂ ಹೇಳಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಅವರನ್ನು ಅಂಡಮಾನ್ ಜೈಲಿಗೆ ಹಾಕಿದ್ದರು ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದಿದ್ದಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಹಾಗೆ ಜೈಲಿನಿಂದ ಹೊರಬಂದಿದ್ದ ಸಾವರ್ಕರ್, ಸ್ವಾತಂತ್ರ್ಯಕ್ಕಾಗಿ ಆನಂತರ ಹೋರಾಡಲಿಲ್ಲ. 1924ರ ನಂತರ ಸಾವರ್ಕರ್ ದೇಶಕ್ಕಾಗಿ ಹೋರಾಟ ಮಾಡಿದ ಉದಾಹರಣೆ ಇದೆಯಾ ? ಆಬಳಿಕ ಸಾವರ್ಕರ್ ಸ್ವಾತಂತ್ರ್ಯ ಸಂಗ್ರಾಮದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. ಈ ಬಗ್ಗೆ ಮಾತ್ರ ಕಾಂಗ್ರೆಸ್ ಪ್ರಶ್ನೆ ಇರುವುದು. ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೂ ಇದನ್ನು ಮಾತ್ರ ಎಂದು ಹೇಳಿದರು.
ಹಾಗೆಂದು, ಸಿದ್ದರಾಮಯ್ಯ ಯಾರಿಗೂ ಆಕ್ರೋಶ ಬರುವಂತೆ ಹೇಳಿಕೆಯನ್ನು ಕೊಟ್ಟಿಲ್ಲ. ಬ್ಯಾನರ್ ಹಾಕಿದ್ದಕ್ಕೆ ಆಕ್ಷೇಪ ಮಾಡಿಲ್ಲ. ಆದರೆ ಬ್ಯಾನರ್ ಹಾಕಿದ್ದವರ ಉದ್ದೇಶದ ಬಗ್ಗೆ ಮಾತಾಡಿದ್ದರು. ಯಾರು ಯಾರ ಬ್ಯಾನರ್ ಹಾಕಿದ್ರೂ ಮೂರನೇ ವ್ಯಕ್ತಿ ತೆಗೆಯುವಂತಿಲ್ಲ. ಯಾರು ಕೂಡ ಆಯಾ ಆಡಳಿತದಿಂದ ಅನುಮತಿ ಪಡೆದು ಬ್ಯಾನರ್ ಹಾಕಬಹುದು. ಬ್ಯಾನರ್ ಹಾಕುವವರು ಉತ್ತಮ ಉದ್ದೇಶದಿಂದ ಹೊಂದಿರಬೇಕು ಅಷ್ಟೇ. ಉದ್ದೇಶ, ದುರುದ್ದೇಶ ಎರಡನ್ನೂ ಇಲ್ಲಿ ಗಮನಿಸಬೇಕು ಎಂದು ಯು.ಟಿ ಖಾದರ್ ಹೇಳಿದರು.
ಆದರೆ ಮಡಿಕೇರಿಯಲ್ಲಿ ಆಗಿರುವ ಘಟನೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ವಿಪಕ್ಷ ನಾಯಕರ ಕಾರಿಗೆ ಮೊಟ್ಟೆ ಎಸೆದಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಜವಾಬ್ದಾರಿ. ಬಿಜೆಪಿ ಆಡಳಿತದಲ್ಲಿ ಪೊಲೀಸ್ ಇಲಾಖೆ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ರಾಜಕೀಯ ಪಕ್ಷದ ಕೈಗೊಂಬೆಯಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ. ಕರ್ನಾಟಕ ರಾಜ್ಯವನ್ನು ಕೋಮುವಾದಿಗಳ ಮತ್ತು ಗೂಂಡಾಗಳ ಕೈಯಲ್ಲಿ ಕೊಟ್ಟು ಸರ್ಕಾರ ಮೌನವಾಗಿ ಕುಳಿತಿದೆ. ಸಮಾಜದಲ್ಲಿ ಅರಾಜಕತೆ ಸೃಷ್ಟಿಸುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
Mangalore Congress party has never said Savarkar is not a freedom fighter says MLA UT Khader
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm