ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
02-04-26 02:46 pm
HK News Staffer
ಕೈಚೀಲ ಖರೀದಿಯಲ್ಲಿ ಅವ್ಯವಹಾರ; ಐಎಎಸ್ ಅಧಿಕಾರಿ ರೋಹಿ...
01-04-26 10:51 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm