ಬ್ರೇಕಿಂಗ್ ನ್ಯೂಸ್
05-10-20 06:32 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಚುನಾವಣೆ ಸಂದರ್ಭದಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಕೆಪಿಸಿಸಿ ಸದಸ್ಯ ಐವನ್ ಡಿಸೋಜಾ ಪ್ರಶ್ನೆ ಮಾಡಿದ್ದಾರೆ.
ಸಿಬಿಐ ದಾಳಿ ಬಿಜೆಪಿ ರಾಜಕೀಯ ಉದ್ದೇಶ ಹೊಂದಿದೆ. ಇಡಿ, ಐ ಟಿ ಬಳಿಕ ಕೇಂದ್ರ ಸರಕಾರ ಈಗ ಸಿಬಿಐಯನ್ನು ದುರ್ಬಳಕೆ ಮಾಡಿದೆ. ದ್ವೇಷ ರಾಜಕಾರಣದಿಂದ ಈ ದಾಳಿ ನಡೆಸಲಾಗಿದೆ. ಈ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಟುವಾಗಿ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
ಉಪ ಚುನಾವಣೆಗೆ ಮೊದಲೇ ಬಿಜೆಪಿ ತನ್ನ ಸೋಲು ಒಪ್ಪಿಕೊಂಡಿದೆ. ಸೋಲಿನ ಭಯದಿಂದ ಸಿಬಿಐ ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರದಲ್ಲಿ ದಾಳಿ ನಡೆಸುವುದಿದ್ದರೆ ಇವರಿಗೆ ಚುನಾವಣೆ ಸಂದರ್ಭದಲ್ಲಿಯೇ ನೆನಪಾಗುವುದೇ ? ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುವುದಿದ್ದರೆ ಮುಖ್ಯಮಂತ್ರಿ ತಮ್ಮ ಮಗನ ಬಗ್ಗೆ ತನಿಖೆ ನಡೆಸಲಿ. ತಾಕತ್ತಿದ್ದರೆ ತಮ್ಮ ಮಗ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ. ಯಡಿಯೂರಪ್ಪ ಅವರಿಗೆ ಗಂಡಸ್ತನ ಇದ್ರೆ ತಮ್ಮ ಮಗ 17 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆರ್ ಟಿ ಜಿ ಎಸ್ ಮುಖಾಂತರ ಲಂಚ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಈ ಪ್ರಕರಣದಲ್ಲಿ ಬಿಜೆಪಿಯ ಹಲವರ ಮೇಲೆ ತನಿಖೆ ಆಗಬೇಕಿದೆ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm