ಬ್ರೇಕಿಂಗ್ ನ್ಯೂಸ್
 
            
                        24-08-22 11:43 am Mangalore Correspondent ಕರಾವಳಿ
 
            ಮಂಗಳೂರು, ಆಗಸ್ಟ್ 24: ಮಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಪ್ರಾಣಾಪಾಯ ಹೆಚ್ಚುತ್ತಿದೆ. ಇದೇ ವೇಳೆ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಸ್ತೆ ಗುಂಡಿ ಬಗ್ಗೆ ಗಮನ ಸೆಳೆಯಲು ಸ್ಪರ್ಧೆ ಹಮ್ಮಿಕೊಂಡಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳ ಅಪಾಯಕಾರಿ ಗುಂಡಿಗಳ ಛಾಯಾಚಿತ್ರಗಳನ್ನು ವಾಟ್ಸಪ್ ಮೂಲಕ 9731485875 ನಂಬರ್ಗೆ ಕಳುಹಿಸಿ, 5,000 ರೂ. ಬಹುಮಾನ ಗೆಲ್ಲಿ ಎಂದು ಸ್ಪರ್ಧೆ ಏರ್ಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಐವನ್ ಡಿ’ಸೋಜ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳೇ ಜಾಸ್ತಿಯಾಗಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ, ಮಹಾನಗರ ಪಾಲಿಕೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಆಡಳಿತ ವಿರೋಧಿಸಿ ಸರ್ಕಾರದ ಗಮನ ಸೆಳೆಯಲು ರಸ್ತೆ ಗುಂಡಿಗಳ ಬಗ್ಗೆಯೇ ಫೋಟೊ ಸ್ಪರ್ಧೆ ಆಯೋಜಿಸಿದ್ದೇವೆ ಎಂದರು.

ಸ್ಪರ್ಧೆ ಆ.24 ರಿಂದ ಆ.28ರ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಮಂಗಳೂರು ನಗರದ ಸ್ಮಾರ್ಟ್ ಸಿಟಿ ವ್ಯಾಪ್ತಿಯ ಅತ್ಯಂತ ದೊಡ್ಡ ಮತ್ತು ಅಪಾಯಕಾರಿ ಗುಂಡಿ ಗುರುತಿಸಿದ ಮೂವರು ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಗುವುದು.


ಪ್ರಥಮ ಬಹುಮಾನವನ್ನು ದ.ಕ ಜಿಲ್ಲಾ ಕಾರ್ಮಿಕ ಪರಿಷತ್ ಬಸ್ ಸಂಘದ ನೌಕರರ ವತಿಯಿಂದ 5 ಸಾವಿರ ರೂ., ದ್ವಿತೀಯ ಬಹುಮಾನ ತ್ರಿಚಕ್ರ, ಗೂಡ್ಸ್, ಟೆಂಪೋ ಮಾಲಕ/ಚಾಲಕರ ಸಂಘದ ವತಿಯಿಂದ 3 ಸಾವಿರ ರೂ, ತೃತೀಯ ಬಹುಮಾನವಾಗಿ ಕುಲಶೇಖರ ಮಹಿಳಾ ದ್ವಿಚಕ್ರ ವಾಹನ ಚಾಲಕ/ಮಾಲಕರ ಪರವಾಗಿ 2 ಸಾವಿರ ರೂ. ನೀಡಲು ತೀರ್ಮಾನಿಸಿದ್ದೇವೆ. ಗುಂಡಿ ಸ್ಪರ್ಧೆಯಲ್ಲಿ ಭಾಗವಹಿಸುವವರು 9731485875 ವಾಟ್ಸಪ್ ಸಂಖ್ಯೆಗೆ ಗುಂಡಿಗಳ ಚಿಕ್ಕ ವೀಡಿಯೋ, ಫೋಟೋ ಮತ್ತು ಜಿಪಿಎಸ್ ಲೊಕೇಷನ್ ಅನ್ನು ಕಳುಹಿಸಿಕೊಡತಕ್ಕದ್ದು, ಇದು ಮನೋರಂಜನೆಗೆ ಅಲ್ಲ, ಜನಜಾಗೃತಿ ಕಾರ್ಯಕ್ರಮ. ಆ.30 ರಂದು ಪಾಲಿಕೆ ಕಚೇರಿ ಮುಂದೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದ್ದಾರೆ.
 
            
            
            Worst potholes in Mangalore send WhatsApp pictures and get price money of 5000 Rs says congress leader Ivan Dsouza.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm