ಬ್ರೇಕಿಂಗ್ ನ್ಯೂಸ್
24-08-22 11:43 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ಮಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಪ್ರಾಣಾಪಾಯ ಹೆಚ್ಚುತ್ತಿದೆ. ಇದೇ ವೇಳೆ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಸ್ತೆ ಗುಂಡಿ ಬಗ್ಗೆ ಗಮನ ಸೆಳೆಯಲು ಸ್ಪರ್ಧೆ ಹಮ್ಮಿಕೊಂಡಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳ ಅಪಾಯಕಾರಿ ಗುಂಡಿಗಳ ಛಾಯಾಚಿತ್ರಗಳನ್ನು ವಾಟ್ಸಪ್ ಮೂಲಕ 9731485875 ನಂಬರ್ಗೆ ಕಳುಹಿಸಿ, 5,000 ರೂ. ಬಹುಮಾನ ಗೆಲ್ಲಿ ಎಂದು ಸ್ಪರ್ಧೆ ಏರ್ಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಐವನ್ ಡಿ’ಸೋಜ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳೇ ಜಾಸ್ತಿಯಾಗಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ, ಮಹಾನಗರ ಪಾಲಿಕೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಆಡಳಿತ ವಿರೋಧಿಸಿ ಸರ್ಕಾರದ ಗಮನ ಸೆಳೆಯಲು ರಸ್ತೆ ಗುಂಡಿಗಳ ಬಗ್ಗೆಯೇ ಫೋಟೊ ಸ್ಪರ್ಧೆ ಆಯೋಜಿಸಿದ್ದೇವೆ ಎಂದರು.
ಸ್ಪರ್ಧೆ ಆ.24 ರಿಂದ ಆ.28ರ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಮಂಗಳೂರು ನಗರದ ಸ್ಮಾರ್ಟ್ ಸಿಟಿ ವ್ಯಾಪ್ತಿಯ ಅತ್ಯಂತ ದೊಡ್ಡ ಮತ್ತು ಅಪಾಯಕಾರಿ ಗುಂಡಿ ಗುರುತಿಸಿದ ಮೂವರು ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಗುವುದು.
ಪ್ರಥಮ ಬಹುಮಾನವನ್ನು ದ.ಕ ಜಿಲ್ಲಾ ಕಾರ್ಮಿಕ ಪರಿಷತ್ ಬಸ್ ಸಂಘದ ನೌಕರರ ವತಿಯಿಂದ 5 ಸಾವಿರ ರೂ., ದ್ವಿತೀಯ ಬಹುಮಾನ ತ್ರಿಚಕ್ರ, ಗೂಡ್ಸ್, ಟೆಂಪೋ ಮಾಲಕ/ಚಾಲಕರ ಸಂಘದ ವತಿಯಿಂದ 3 ಸಾವಿರ ರೂ, ತೃತೀಯ ಬಹುಮಾನವಾಗಿ ಕುಲಶೇಖರ ಮಹಿಳಾ ದ್ವಿಚಕ್ರ ವಾಹನ ಚಾಲಕ/ಮಾಲಕರ ಪರವಾಗಿ 2 ಸಾವಿರ ರೂ. ನೀಡಲು ತೀರ್ಮಾನಿಸಿದ್ದೇವೆ. ಗುಂಡಿ ಸ್ಪರ್ಧೆಯಲ್ಲಿ ಭಾಗವಹಿಸುವವರು 9731485875 ವಾಟ್ಸಪ್ ಸಂಖ್ಯೆಗೆ ಗುಂಡಿಗಳ ಚಿಕ್ಕ ವೀಡಿಯೋ, ಫೋಟೋ ಮತ್ತು ಜಿಪಿಎಸ್ ಲೊಕೇಷನ್ ಅನ್ನು ಕಳುಹಿಸಿಕೊಡತಕ್ಕದ್ದು, ಇದು ಮನೋರಂಜನೆಗೆ ಅಲ್ಲ, ಜನಜಾಗೃತಿ ಕಾರ್ಯಕ್ರಮ. ಆ.30 ರಂದು ಪಾಲಿಕೆ ಕಚೇರಿ ಮುಂದೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದ್ದಾರೆ.
Worst potholes in Mangalore send WhatsApp pictures and get price money of 5000 Rs says congress leader Ivan Dsouza.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm