ಬ್ರೇಕಿಂಗ್ ನ್ಯೂಸ್
30-08-22 10:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಫಾಜಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ತೋರಿಕೆಗೆ ಮಾತ್ರ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೃತ್ಯದ ಹಿಂದೆ ಯಾರಿದ್ದಾರೆ, ಯಾರೆಲ್ಲ ಸೇರಿ ಸಂಚು ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಿಲ್ಲ. ಕೃತ್ಯದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಫಾಝಿಲ್ ತಂದೆ ಫಾರೂಕ್ ಕಣ್ಣೀರು ಹಾಕಿದ್ದಾರೆ. ನನ್ನ ಮಗನಿಗೆ ಬಂದಿರುವ ಸ್ಥಿತಿ ಇನ್ಯಾರಿಗೂ ಬರಬಾರದು. ಇವರನ್ನು ಶಿಕ್ಷಿಸದೆ ಬಿಟ್ಟರೆ ಮತ್ತೆ ಇಂತಹದ್ದೇ ಕೃತ್ಯ ನಡೆಯುತ್ತದೆ ಎಂದು ಹೇಳಿದ್ದಾರೆ.
ಸುರತ್ಕಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಫಾರೂಕ್ ಅವರು, 27 ವರ್ಷ ಹಳೆಯ ಕಾರಿನಲ್ಲಿ ಏಳು ಮಂದಿ ಆರೋಪಿಗಳು ಪರಾರಿಯಾಗಲು ಸಾಧ್ಯನಾ? ಇದ್ರ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡ ಇದೆ. ಷಡ್ಯಂತ್ರ ನಡೆಸಿ ಮಗನನ್ನು ಕೊಂದಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ನೆಪದಲ್ಲಿ ಪಲ್ಲಮಜಲು ನಿವಾಸಿಯನ್ನು ಬಂಧಿಸಲಾಗಿದೆ. ಆದರೆ ಆತನನ್ನು ನೋಡಿದರೆ, ಆತ ಹಣ ನೀಡೋದಲ್ಲ. ಚಹಾ ಕುಡಿಯಲು ಆತನಿಗೇ ಯಾರಾದ್ರೂ ಹಣ ನೀಡಬೇಕು ಎನ್ನುವಂತಿದ್ದಾನೆ. ಅಂಥವರು ಕೃತ್ಯಕ್ಕೆ ಹಣ ಸಹಾಯ ಮಾಡಿದ್ದಾರೆ ಎಂದರೆ ನಂಬುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಇಲ್ಲಿನ ಪೊಲೀಸ್ ಅಧಿಕಾರಿಗಳು ಸರಿಯಾಗಿದ್ದಾರೆ, ಸರಿಯಾಗಿಲ್ಲ ಎಂದು ಹೇಳುವುದಿಲ್ಲ. ಆದರೆ ರಾಜಕೀಯದವರು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಕೃತ್ಯದ ಹಿಂದೆ ಕಾಣದ ಕೈಗಳ ಸಹಕಾರ ಇದೆ. ಅವರನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂರು ವಾಹನಗಳ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಆಯುಧಗಳನ್ನು ಪೂರೈಸಿದ್ದು ಯಾರು ಎಂದು ಹೇಳಿಲ್ಲ. ಕೇವಲ ಸಿಸಿಟಿವಿ ಫೂಟೇಜ್ ಹಿಡಿದು ನಾಮಕಾವಸ್ತೆಗೆ ಪ್ರಕರಣವನ್ನು ಮುಗಿಸಿದ್ದಾರೆ. ಕೊಲೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಮ್ಮಲ್ಲು ಕೆಲವು ದಾಖಲೆಗಳಿವೆ. ಪೊಲೀಸರು ಕೇಳಿದರೆ ಆ ದಾಖಲೆಗಳನ್ನು ನೀಡಲು ಸಿದ್ಧರಿದ್ದೇವೆ, ಫಾಝಿಲ್ ಕೊಲೆಯ ಹಿಂದೆ ಇರುವ ಕಾಣದ ಕೈಗಳನ್ನು ಪೊಲೀಸರು ಹೊರತರಬೇಕು ಎಂದವರು ಆಗ್ರಹಿಸಿದರು.
Farooq, father of youngster Fazil who was brutally hacked to death in Surathkal, alleged that more arrests need to be done in his son's murder case.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm