ಬ್ರೇಕಿಂಗ್ ನ್ಯೂಸ್
31-08-22 01:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31 : ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ನಡೆಸಿ, ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವಿಚಾರಗಳನ್ನು ಹಂಚಿಕೊಳ್ಳುತ್ತಿರುವ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತಿರುವುದು, ಕೆಲವು ವ್ಯಕ್ತಿಗಳ ಫೋಟೊಗಳನ್ನು ಮಾರ್ಕ್ ಮಾಡಿ ಹಂಚುತ್ತಿರುವುದು, ಆಕ್ಷೇಪಾರ್ಹ ಬರಹಗಳನ್ನು ವಾಟ್ಸಪ್, ಫೇಸ್ಬುಕ್ ನಲ್ಲಿ ಹಂಚುತ್ತಿರುವ ಬಗ್ಗೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣವನ್ನು ಮಂಗಳೂರು ಸಿಟಿ ಸೈಬರ್ ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ. ಯಾರು ಇಂತಹ ಬರಹ, ಅನಪೇಕ್ಷಿತ ವಿಚಾರಗಳನ್ನು ಷೇರ್ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಿಗಾ ಇಟ್ಟಿದ್ದೇವೆ. ಇಬ್ಬರನ್ನು ವಶಕ್ಕೆ ಪಡೆಯಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಫೋಟೋವನ್ನು ಮಾರ್ಕ್ ಮಾಡಿ ಆಕ್ಷೇಪಾರ್ಹ ರೀತಿ ಚಿತ್ರಿಸಿರುವುದು, ಪ್ರಧಾನಿ ಕಾರ್ಯಕ್ರಮದಲ್ಲಿ ಗೊಂದಲ ಉಂಟು ಮಾಡುವ ರೀತಿ ಪೋಸ್ಟ್ ಮಾಡಿರುವುದನ್ನು ಗಮನಿಸಿದ್ದೇವೆ. ಗೊಂದಲ ಉಂಟು ಮಾಡುವುದಕ್ಕೆಂದೇ ವಾಟ್ಸಪ್ ಗ್ರೂಪ್ ರಚನೆ ಮಾಡಲಾಗಿದೆ. ಈ ಗ್ರೂಪ್ ಗಳನ್ನು ಸೋಷಿಯಲ್ ಮಿಡಿಯಾ ಸೆಲ್ ಮಾನಿಟರ್ ಮಾಡುತ್ತಿದೆ. ಯಾವುದೇ ಪೋಸ್ಟ್ ಅಪರಾಧಕ್ಕೆ ಕಾರಣವಾಗಬಲ್ಲ ವಿಚಾರ, ಗೊಂದಲಕ್ಕೀಡು ಮಾಡುವಂತಿದ್ದಲ್ಲಿ ಅಂತಹ ಪೋಸ್ಟ್ ಬಗ್ಗೆ ಪ್ರಕರಣ ದಾಖಲು ಮಾಡುತ್ತೇವೆ. ಇಲ್ಲದಿದ್ದಲ್ಲಿ ಅಂತಹ ವ್ಯಕ್ತಿಗಳಿಂದ ಶೂರಿಟಿ ಬಾಂಡ್ ಪಡೆಯಲಿದ್ದೇವೆ. ಈಗಾಗಲೇ ಎರಡು ಪ್ರಕರಣ ದಾಖಲಿಸಿದ್ದೇವೆ. ಪೋಸ್ಟ್ ಮಾಡಿದವರನ್ನು ವಶಕ್ಕೆ ಪಡೆಯುತ್ತೇವೆ ಎಂದು ಕಮಿಷನರ್ ತಿಳಿಸಿದ್ದಾರೆ.
![]()
ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ. ಸೆಕ್ಷನ್ 107, 110 ಅಡಿ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಕಮೀಷನರ್ ಎನ್.ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಪೋಸ್ಟ್ ಹಂಚಿಕೆ ಬಗ್ಗೆ ಯಾರು ದೂರು ಕೊಟ್ಟಿದ್ದಾರೆ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗ ಹೇಳುವಂತಿಲ್ಲ ಎಂದರು.
Modi Visit, Defamatory post against bp state president Nalin kumar kateel , 2 cases registered in Mangalore.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm