ಬ್ರೇಕಿಂಗ್ ನ್ಯೂಸ್
01-09-22 05:26 pm Mangalore Correspondent ಕರಾವಳಿ
Photo credits : TV9 kannada
ಮಂಗಳೂರು, ಸೆ.1: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಂದೋಬಸ್ತ್ ಬಗ್ಗೆ ನಿಗಾ ಇಡಲು ಖುದ್ದಾಗಿ ಎಡಿಜಿಪಿ ಅಲೋಕ್ ಕುಮಾರ್ ಉಸ್ತುವಾರಿ ಹೊತ್ತುಕೊಂಡಿದ್ದಾರೆ.
ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ವೇದಿಕೆ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಮೈದಾನದಲ್ಲಿ ಎಲ್ಲ ಕಡೆ ಸಿಸಿ ಕ್ಯಾಮೆರಾ ಅಳವಡಿಸದೇ ಇರುವುದಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಗರಂ ಆಗಿದ್ದು ಕೂಡಲೇ ಎಲ್ಲ ಕಡೆಗಳಲ್ಲಿ ಸಿಸಿ ಅಳವಡಿಸಲು ಕಾರ್ಯಕ್ರಮ ನಿರ್ವಹಣೆ ಹೊಣೆ ಹೊತ್ತುಕೊಂಡ ಕಂಪೆನಿ ಪ್ರತಿನಿಧಿಗಳಿಗೆ ತಾಕೀತು ಮಾಡಿದ್ದಾರೆ.
ಇಷ್ಟು ದೊಡ್ಡ ಮೈದಾನದಲ್ಲಿ ಕೇವಲ ಎರಡೇ ಸಿಸಿ ಕ್ಯಾಮರಾ ಹಾಕಿದ್ದೀರಿ. ಇದರಿಂದ ಏನು ಮಾಡೋಕೆ ಸಾಧ್ಯ. ತಕ್ಷಣ ಮೈದಾನದ ಎಲ್ಲಾ ಭಾಗಗಳಿಗೆ ಮತ್ತು ಎಲ್ಲ ಕೋನಗಳು ಕವರ್ ಆಗುವಂತೆ ಸಿಸಿಟಿವಿ ಕ್ಯಾಮೆರಾ ಹಾಕಬೇಕು ಎಂದು ಕಾರ್ಯಕ್ರಮ ಆಯೋಜಕ ಕಂಪೆನಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ, ಭದ್ರತೆಗೆ ನಿಯೋಜಿಸಿದ ಪೊಲೀಸರಿಗೂ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರು ಕೂಡ ಮೊಬೈಲ್ ನಲ್ಲಿ ಫೋಟೋ ತೆಗೆಯಬಾರದು. ನಿಮ್ಮ ಕಣ್ಣು ಮೈದಾನದಲ್ಲಿ ಸೇರಿದ ಜನರ ಮೇಲೆ ಇರಬೇಕು. ಪ್ರಧಾನಿ ಭಾಷಣ ಮಾಡುವ ಸಂದರ್ಭದಲ್ಲಿ ಭಾಷಣ ನೋಡೋದು, ಮೊಬೈಲ್ ನಲ್ಲಿ ಫೋಟೋ ತೆಗೆಯೋದು ಮಾಡಬಾರದು ಎಂದು ಹೇಳಿದ್ದಾರೆ.
ಅಲ್ಲದೆ, ಕಾರ್ಯಕ್ರಮದಲ್ಲಿ ಬಂದವರ ಜೊತೆ ಯಾವುದೇ ಕಿರಿಕ್ ಮಾಡಬಾರದು. ಗೊಂದಲ ಸೃಷ್ಠಿಯಾದರೆ ಯಾರ ಮೇಲೂ ಕೈ ಮಾಡಬಾರದು. ಅವರ ಬಾಯಿ ಮುಚ್ಚಿಸಿ ಅಲ್ಲಿಂದ ವ್ಯಾನ್ ಹತ್ತಿರ ಕರೆತರಬೇಕು. ಕಾರ್ಯಕ್ರಮಕ್ಕೆ ಬರುವವರ ಶೂ ಸಹಿತ ಸಂಪೂರ್ಣ ತಪಾಸಣೆ ಮಾಡಬೇಕು. ಕಪ್ಪು ಬಟ್ಟೆಯಾಗಲೀ, ಕಪ್ಪು ಶರ್ಟ್, ಟೀ ಶರ್ಟ್ ಧರಿಸುವುದಕ್ಕೂ ಅವಕಾಶ ಇಲ್ಲ. ಜನರಲ್ಲಿ ಮ್ಯಾಚ್ ಬಾಕ್ಸ್, ಇನ್ನಿತರ ಬೆಂಕಿ ಹೊತ್ತಿಕೊಳ್ಳಬಲ್ಲ ಯಾವುದೇ ವಸ್ತುವನ್ನೂ ತರುವುದಕ್ಕೆ ಅವಕಾಶ ಇಲ್ಲ. ಈ ಬಗ್ಗೆ ಪೊಲೀಸರು ನಿಗಾ ವಹಿಸಬೇಕಾಗುತ್ತದೆ ಎಂದು ಎಡಿಜಿಪಿ ಖಡಕ್ ಸೂಚನೆ ನೀಡಿದ್ದಾರೆ.
Adgp Alok Kumar full on rounds as Modi to arrive in Mangalore, black clothes, phones restricted. He was also angry at the police officers as no CCTV cameras were installed covering the ground.
20-02-25 10:06 pm
Bangalore Correspondent
Kalaburagi farmers protest, crocodile: ಕಲಬುರಗ...
20-02-25 08:59 pm
Chikkamagaluru Car Murder, Body Found; ಚಿಕ್ಕಮ...
20-02-25 06:59 pm
Chikkaballapur, Muzrai scam, Revenue Inspecto...
20-02-25 04:45 pm
ಉದಯಗಿರಿ ಗಲಭೆ ಪ್ರಕರಣ ; ಪ್ರಚೋದನಕಾರಿ ಭಾಷಣ ಮಾಡಿದ್...
20-02-25 02:47 pm
19-02-25 11:00 pm
HK News Desk
ಬಾಲಕನಿದ್ದಾಗ ನುಂಗಿದ್ದ ಪೆನ್ ಕ್ಯಾಪ್ ; 21 ವರ್ಷ ಕಳ...
19-02-25 06:41 pm
Maha Kumbh river, NGT Board: ಕುಂಭಮೇಳ ನದಿ ನೀರು...
19-02-25 01:54 pm
ಇಬ್ಬರು ಹೆಂಡಿರ ಮುದ್ದಿನ ಗಂಡ ; ವಾರದ 3 ದಿನ ಅಲ್ಲಿ....
18-02-25 10:49 pm
Hindu idols Bishop House, Pala diocese, Kera...
18-02-25 10:45 pm
20-02-25 06:48 pm
Mangalore Correspondent
Kmc Mangalore, hospital: 2 ವರ್ಷದ ಮಗುವಿನ ಗಂಟಲಲ...
19-02-25 01:56 pm
Satish Jarkiholi, Mangalore: ಕೆಪಿಸಿಸಿ ಅಧ್ಯಕ್ಷ...
18-02-25 12:36 pm
Dinesh Gundurao, Munner katipalla, Sand Mafia...
17-02-25 10:56 pm
Sterlite Power, Protest, 400kv Power, Mangalo...
17-02-25 09:20 pm
20-02-25 01:22 pm
Mangalore Correspondent
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm
Madikeri police, Fake Scheme, Mangalore crime...
18-02-25 06:04 pm
Mangalore Crime, Surathkal, Car: ಮದುವೆ ಸಮಾರಂಭ...
18-02-25 12:11 pm