ಬ್ರೇಕಿಂಗ್ ನ್ಯೂಸ್
01-09-22 05:26 pm Mangalore Correspondent ಕರಾವಳಿ
Photo credits : TV9 kannada
ಮಂಗಳೂರು, ಸೆ.1: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಂದೋಬಸ್ತ್ ಬಗ್ಗೆ ನಿಗಾ ಇಡಲು ಖುದ್ದಾಗಿ ಎಡಿಜಿಪಿ ಅಲೋಕ್ ಕುಮಾರ್ ಉಸ್ತುವಾರಿ ಹೊತ್ತುಕೊಂಡಿದ್ದಾರೆ.
ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ವೇದಿಕೆ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಮೈದಾನದಲ್ಲಿ ಎಲ್ಲ ಕಡೆ ಸಿಸಿ ಕ್ಯಾಮೆರಾ ಅಳವಡಿಸದೇ ಇರುವುದಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಗರಂ ಆಗಿದ್ದು ಕೂಡಲೇ ಎಲ್ಲ ಕಡೆಗಳಲ್ಲಿ ಸಿಸಿ ಅಳವಡಿಸಲು ಕಾರ್ಯಕ್ರಮ ನಿರ್ವಹಣೆ ಹೊಣೆ ಹೊತ್ತುಕೊಂಡ ಕಂಪೆನಿ ಪ್ರತಿನಿಧಿಗಳಿಗೆ ತಾಕೀತು ಮಾಡಿದ್ದಾರೆ.
ಇಷ್ಟು ದೊಡ್ಡ ಮೈದಾನದಲ್ಲಿ ಕೇವಲ ಎರಡೇ ಸಿಸಿ ಕ್ಯಾಮರಾ ಹಾಕಿದ್ದೀರಿ. ಇದರಿಂದ ಏನು ಮಾಡೋಕೆ ಸಾಧ್ಯ. ತಕ್ಷಣ ಮೈದಾನದ ಎಲ್ಲಾ ಭಾಗಗಳಿಗೆ ಮತ್ತು ಎಲ್ಲ ಕೋನಗಳು ಕವರ್ ಆಗುವಂತೆ ಸಿಸಿಟಿವಿ ಕ್ಯಾಮೆರಾ ಹಾಕಬೇಕು ಎಂದು ಕಾರ್ಯಕ್ರಮ ಆಯೋಜಕ ಕಂಪೆನಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ, ಭದ್ರತೆಗೆ ನಿಯೋಜಿಸಿದ ಪೊಲೀಸರಿಗೂ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರು ಕೂಡ ಮೊಬೈಲ್ ನಲ್ಲಿ ಫೋಟೋ ತೆಗೆಯಬಾರದು. ನಿಮ್ಮ ಕಣ್ಣು ಮೈದಾನದಲ್ಲಿ ಸೇರಿದ ಜನರ ಮೇಲೆ ಇರಬೇಕು. ಪ್ರಧಾನಿ ಭಾಷಣ ಮಾಡುವ ಸಂದರ್ಭದಲ್ಲಿ ಭಾಷಣ ನೋಡೋದು, ಮೊಬೈಲ್ ನಲ್ಲಿ ಫೋಟೋ ತೆಗೆಯೋದು ಮಾಡಬಾರದು ಎಂದು ಹೇಳಿದ್ದಾರೆ.
ಅಲ್ಲದೆ, ಕಾರ್ಯಕ್ರಮದಲ್ಲಿ ಬಂದವರ ಜೊತೆ ಯಾವುದೇ ಕಿರಿಕ್ ಮಾಡಬಾರದು. ಗೊಂದಲ ಸೃಷ್ಠಿಯಾದರೆ ಯಾರ ಮೇಲೂ ಕೈ ಮಾಡಬಾರದು. ಅವರ ಬಾಯಿ ಮುಚ್ಚಿಸಿ ಅಲ್ಲಿಂದ ವ್ಯಾನ್ ಹತ್ತಿರ ಕರೆತರಬೇಕು. ಕಾರ್ಯಕ್ರಮಕ್ಕೆ ಬರುವವರ ಶೂ ಸಹಿತ ಸಂಪೂರ್ಣ ತಪಾಸಣೆ ಮಾಡಬೇಕು. ಕಪ್ಪು ಬಟ್ಟೆಯಾಗಲೀ, ಕಪ್ಪು ಶರ್ಟ್, ಟೀ ಶರ್ಟ್ ಧರಿಸುವುದಕ್ಕೂ ಅವಕಾಶ ಇಲ್ಲ. ಜನರಲ್ಲಿ ಮ್ಯಾಚ್ ಬಾಕ್ಸ್, ಇನ್ನಿತರ ಬೆಂಕಿ ಹೊತ್ತಿಕೊಳ್ಳಬಲ್ಲ ಯಾವುದೇ ವಸ್ತುವನ್ನೂ ತರುವುದಕ್ಕೆ ಅವಕಾಶ ಇಲ್ಲ. ಈ ಬಗ್ಗೆ ಪೊಲೀಸರು ನಿಗಾ ವಹಿಸಬೇಕಾಗುತ್ತದೆ ಎಂದು ಎಡಿಜಿಪಿ ಖಡಕ್ ಸೂಚನೆ ನೀಡಿದ್ದಾರೆ.
Adgp Alok Kumar full on rounds as Modi to arrive in Mangalore, black clothes, phones restricted. He was also angry at the police officers as no CCTV cameras were installed covering the ground.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm