ಬ್ರೇಕಿಂಗ್ ನ್ಯೂಸ್
06-10-20 08:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 6: ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೋವಿಡ್ 19 ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯದ ವೇಳೆಗೆ ತಿರುಗಾಟಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕೆಲಸಗಾರರಿದ್ದಾರೆ. ಈ ಬಾರಿ ಕೊರೊನಾದಿಂದಾಗಿ ಯಕ್ಷಗಾನ ನಡೆಯದೆ ಕಲಾವಿದರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮತ್ತೆ ತಿರುಗಾಟಕ್ಕೆ ಸಮಯ ಬಂದರೂ, ಸರಕಾರದ ಕಡೆಯಿಂದ ಸೂಚನೆ ಬಂದಿರಲಿಲ್ಲ. ಈ ನಿಟ್ಟಿನಲ್ಲಿ ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಅವಕಾಶ ನೀಡಬೇಕೆಂದು ಮುಜರಾಯಿ ಸಚಿವರಿಗೆ ಕಲಾವಿದರು ಮತ್ತು ಮೇಳದ ವ್ಯವಸ್ಥಾಪಕರು ಸೇರಿ ಮನವಿ ಸಲ್ಲಿಸಿದ್ದರು.
ಕಲಾವಿದರ ಪರವಾಗಿ ಭಾಗವತ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಉಜಿರೆ ಅಶೋಕ್ ಭಟ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಸ್ಯ ಕಲಾವಿದ ಸೀತಾರಾಮ್ ಕುಮಾರ್ ಸೇರಿದಂತೆ ಕಲಾವಿದರು ಮತ್ತು ಮೇಳದ ಪ್ರಮುಖರು ಸಚಿವರನ್ನು ಭೇಟಿಯಾಗಿದ್ದರು. ವೃತ್ತಿಪರ ಯಕ್ಷಗಾನ ಮೇಳಗಳು ನಿಂತಲ್ಲಿ ಕಲಾವಿದರ ಬದುಕು ದುಸ್ತರ ಆಗಲಿದೆ. ಈಗಾಗಲೇ ಕೋವಿಡ್ ಕಾರಣದಿಂದ ನೊಂದ ಕಲಾವಿದರ ನೆರವಿಗೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಮೇಳಗಳ ಸಹಿತ ಕಲಾವಿದರು ಮತ್ತು ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ವಿವರಿಸಿದರು.
ಈಗಿರುವ ಮೇಳಗಳಲ್ಲಿ ಯಾವುದೇ ಆದರೂ ನಿಲುಗಡೆಯಾದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಸಂಪನ್ಮೂಲವಿರುವ ದೇವಳದ ಮೂಲಕ ಹೆಚ್ಚುವರಿ ಮೇಳಗಳನ್ನು ರಚಿಸಲು ಇಲಾಖೆ ಪರಿಶೀಲಿಸ ಬೇಕೆಂಬ ಮನವಿ ಸಭೆಯಲ್ಲಿ ಕೇಳಿಬಂತು.
ಸರ್ಕಾರದ ಪರವಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಇಂತಹ ಪರಿಸ್ಥಿತಿಯಲ್ಲಿ ಯಕ್ಷಗಾನ ಮೇಳಗಳ ಕೊನೆಯ ಕಲಾವಿದನಿಗೂ ತೊಂದರೆ ಆಗದಂತೆ ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ ಎಂದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಉಪಸ್ಥಿತರಿದ್ದರು.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 06:36 pm
Mangalore Correspondent
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm