ಬ್ರೇಕಿಂಗ್ ನ್ಯೂಸ್
01-09-22 09:38 pm Mangalore Correspondent ಕರಾವಳಿ
ಮಂಗಳೂರು, ಸೆ.1 : ಪ್ರಧಾನಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹೈಎಲರ್ಟ್ ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ವೇದಿಕೆಯನ್ನು ಸಂಪೂರ್ಣ ಎಸ್ ಪಿಜಿ ಭದ್ರತಾ ತಂಡ ವಶಕ್ಕೆ ಪಡೆದಿದೆ.
ಕಾರ್ಯಕ್ರಮದ ಸಭಾಂಗಣ, ವೇದಿಕೆ ಮತ್ತು ಬೃಹತ್ ಪೆಂಡಾಲ್ ಅಳವಡಿಕೆ ಕಾರ್ಯ ಸಂಪೂರ್ಣ ಆಗಿದ್ದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಬಂದೋಬಸ್ತ್ ಮತ್ತು ಅಂತಿಮ ಹಂತದ ಸಿದ್ಧತೆಯನ್ನು ವೀಕ್ಷಣೆ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತು ದ.ಕ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಗೃಹ ಸಚಿವರು ಪೆಂಡಾಲ್ ಮತ್ತು ವೇದಿಕೆಯನ್ನು ವೀಕ್ಷಣೆ ಮಾಡಿದ್ದಾರೆ. ಅಲ್ಲದೆ, ಭದ್ರತೆ ಬಗ್ಗೆಯೂ ನಿಗಾ ವಹಿಸಿದ್ದಾರೆ.
ಸುಮಾರು 25 ಎಕರೆ ಜಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು ಎರಡು ಜಿಲ್ಲೆಗಳ ಸರಕಾರಿ ನೌಕರರು, ಸ್ವಸಹಾಯ ಗುಂಪುಗಳ ಸದಸ್ಯರು, ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ, ಎರಡೂ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವೇದಿಕೆಯ ಆಸುಪಾಸಿನಲ್ಲಿ 10ಕ್ಕೂ ಹೆಚ್ಚು ಎಲ್.ಇ.ಡಿ ಪರದೆ ಅಳವಡಿಸಲಾಗಿದೆ. ವೇದಿಕೆಯ ಸುತ್ತ ತಡೆಬೇಲಿ ಹಾಕಿದ್ದು ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಅಲ್ಲದೆ, ಮೈದಾನದ ಸುತ್ತಲೂ ತಡೆಬೇಲಿ ಹಾಕಿದ್ದಾರೆ.
ಹೊರ ಜಿಲ್ಲೆಗಳಿಂದಲೂ ಹೆಚ್ಚುವರಿ ಪೊಲೀಸರನ್ನು ಕರೆಸಿ ಅಲ್ಲಲ್ಲಿ ನಿಯೋಜನೆ ಮಾಡಲಾಗಿದೆ. ಒಟ್ಟು ಮೂರು ಸಾವಿರಕ್ಕೂ ಹೆಚ್ಚು ಪೊಲೀಸರು ಮೈದಾನ ಮತ್ತು ಆಸುಪಾಸಿನಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ರಾಪಿಡ್ ಆ್ಯಕ್ಷನ್ ಫೋರ್ಸ್ ತಂಡವನ್ನೂ ಕರೆಸಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆದಲ್ಲಿ ಈ ಪಡೆ ಕ್ರಮಕ್ಕೆ ಮುಂದಾಗಲಿದೆ.
ಡಿಜಿಪಿ, ಎಡಿಜಿಪಿ ಭದ್ರತೆ ಹೊಣೆ
ವೇದಿಕೆ ಪರಿಶೀಲನೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರಧಾನಿಯವರು ಬಂದು ವಾಪಾಸ್ ಹೋಗುವವರೆಗೆ ಎಲ್ಲಾ ಭದ್ರತೆ ಮಾಡಲಾಗಿದೆ. ಡಿಜಿಪಿ ಮತ್ತು ಎಡಿಜಿಪಿಯವರು ಸಂಪೂರ್ಣ ಭದ್ರತೆ ನೋಡಿಕೊಳ್ತಾರೆ. 100 ಜನ ಉನ್ನತ ಪೊಲೀಸ್ ಅಧಿಕಾರಿಗಳು ಇಲ್ಲಿ ಇರ್ತಾರೆ. ಸುಮಾರು 2000 ಸಾವಿರ ಸಿವಿಲ್ ಪೊಲೀಸರನ್ನು ಭದ್ರತೆಗೆ ನೇಮಿಸಲಾಗಿದೆ. ಕೆಎಸ್ಸಾರ್ಪಿ, ಸಿಎಆರ್, ಎಎನ್ ಎಫ್, ಆರ್ ಎಎಫ್, ಕೋಸ್ಟಲ್ ಸೆಕ್ಯೂರಿಟಿ, ಐಎಸ್ ಡಿ ಹಾಗೂ ಗರುಡ ಪಡೆ ಇರುತ್ತದೆ. ಒಟ್ಟಾರೆ ಮೂರು ಸಾವಿರಕ್ಕೂ ಹೆಚ್ಚು ಪೊಲೀಸ್ ಭದ್ರತೆ ಇರಲಿದೆ ಎಂದು ತಿಳಿಸಿದ್ದಾರೆ.
As Modi to arrive to Mangalore high alert has been issued all over the city for which three thousand policemen have been deployed for security purposes.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm