ಬ್ರೇಕಿಂಗ್ ನ್ಯೂಸ್
02-09-22 10:27 pm Mangalore Correspondent ಕರಾವಳಿ
ಮಂಗಳೂರು, ಸೆ.2 : ಮಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ಎದುರಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರು ಕೇಳಿಬರುತ್ತಿದ್ದಂತೆ ಹರ್ಷೋದ್ಗಾರ ಕೇಳಿಬಂದಿದೆ. ಸರ್ಕಾರಿ ಕಾರ್ಯಕ್ರಮ ಆಗಿದ್ದರೂ ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ಮೋದಿ ಕಾರ್ಯಕ್ರಮವನ್ನು ಪಕ್ಷದ ಪ್ರಚಾರ ವೇದಿಕೆ ಎಂದೇ ಪರಿಗಣಿಸಲಾಗಿತ್ತು. ಈ ವೇಳೆ, ಯಡಿಯೂರಪ್ಪ ಹೆಸರನ್ನು ಉಲ್ಲೇಖ ಮಾಡುತ್ತಿದ್ದಂತೆ ಕರಾವಳಿ ಜನ ಹರ್ಷ ತೋರಿದ್ದನ್ನು ವಿಶೇಷವಾಗಿ ಪರಿಗಣಿಸಲಾಗಿದೆ.
ಅಂದಾಜು ಎರಡು ಲಕ್ಷದಷ್ಟು ಸೇರಿದ ಜನರ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಮನ ಸೆಳೆದಿದ್ದಾರೆ. ಕೇಂದ್ರ ಸರ್ಕಾರಕ್ಕೆ ಸೇರಿದ್ದ ಕಾರ್ಯಕ್ರಮ ಆಗಿದ್ದರೂ ಯಡಿಯೂರಪ್ಪ ವೇದಿಕೆಯಲ್ಲಿ ಸ್ಥಾನ ಪಡೆದಿದ್ದರು. ಇದಕ್ಕೆ ಪ್ರಧಾನಿ ಮೋದಿ ವೈಯಕ್ತಿಕ ಆಹ್ವಾನವೇ ಕಾರಣ ಎನ್ನಲಾಗುತ್ತಿದೆ. ಇತ್ತೀಚೆಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಆಯ್ಕೆಯಾಗಿರುವ ಯಡಿಯೂರಪ್ಪ ಅವರು ವೇದಿಕೆಗೆ ಬರುತ್ತಿದ್ದಂತೆ ಜನರು ಹರ್ಷೋದ್ಘಾರ ಮಾಡಿದ್ದಾರೆ. ಅಲ್ಲದೆ ಪ್ರಧಾನಿ ಮೋದಿ ವೇದಿಕೆಗೆ ಆಗಮಿಸಿದ ಬಳಿಕ ಎಲ್ಲರನ್ನೂ ಸ್ವಾಗತಿಸುವ ವೇಳೆಯೂ ಬಿಎಸ್ ವೈ ಹೆಸರು ಬಂದಾಗ ಜನರು ಜಯಘೋಷ ಕೂಗಿದ್ದಾರೆ. ಇದನ್ನು ಪ್ರಧಾನಿ ಮೋದಿ ಎದುರುಗಡೆ ಅಭಿಮಾನಿಗಳು ರಾಜ್ಯದಲ್ಲಿ ಯಡಿಯೂರಪ್ಪ ವರ್ಚಸ್ಸಿನ ಪ್ರದರ್ಶನ ಮಾಡಿದ್ದಾಗಿ ವ್ಯಾಖ್ಯಾನಿಸಲಾಗುತ್ತಿದೆ. ಕರಾವಳಿಯಲ್ಲೂ ಯಡಿಯೂರಪ್ಪ ವರ್ಚಸ್ಸು ಹೊಂದಿರುವುದನ್ನು ಮತ್ತು ಕರಾವಳಿಯವರೇ ರಾಜ್ಯಾಧ್ಯಕ್ಷ ಆಗಿದ್ದರೂ ಯಡಿಯೂರಪ್ಪ ತನ್ನ ಖದರ್ ಉಳಿಸಿಕೊಂಡಿರುವುದನ್ನು ಸೂಚಿಸಿತ್ತು ಎನ್ನುವ ಮಾತು ಕೇಳಿಬಂದಿದೆ.




ಉಡುಪಿ ಕೃಷ್ಣ ಮತ್ತು ಪರಶುರಾಮ ಪುತ್ಥಳಿ
ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರಿಗೆ ಮಲ್ಲಿಗೆ ಹೂವಿನ ಮಾಲೆ ಹಾಕಿ ಸನ್ಮಾನಿಸಲಾಯಿತು. ಅಲ್ಲದೆ ಉಡುಪಿ ಶ್ರೀಕೃಷ್ಣ ದೇವರ ಪುತ್ಥಳಿ ಮತ್ತು ಪರಶುರಾಮ ಪುತ್ಥಳಿಯನ್ನು ನೀಡಿ ಗೌರವಿಸಲಾಯಿತು. ಪರಶುರಾಮ ಕೊಡಲಿ ಬೀಸಿ ತುಳುನಾಡೆಂದು ಕರೆಯಲ್ಪಡುವ ಕರಾವಳಿ ಭಾಗವನ್ನು ಸೃಷ್ಟಿಸಿದ್ದಾನೆ ಎನ್ನುವ ಪ್ರತೀತಿ ಇರುವುದರಿಂದ ಇದೇ ವಿಗ್ರಹವನ್ನು ಉಡುಪಿಯಲ್ಲಿ ತಯಾರಿಸಲಾಗಿತ್ತು.
Modi in Mangalore, large crowd greets B S Yediyurappa as he walks on stage. Prime Minister Narendra Modi arrived at Goldfinch City grounds at Bangra Kuluru in Mangaluru at 2.10 p.m. on September 2, 2022 to dedicate and lay foundation stone for eight projects worth Rs. 3,800 crore.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am