ಬ್ರೇಕಿಂಗ್ ನ್ಯೂಸ್
03-09-22 09:06 pm Mangalore Correspondent ಕರಾವಳಿ
ಉಳ್ಳಾಲ, ಆ.3 : ಕೈರಂಗಳ ಶಾರದಾ ಗಣಪತಿ ವಿದ್ಯಾಕೇಂದ್ರ ಸಂಚಾಲಕರೂ, ಧಾರ್ಮಿಕ ಮುಖಂಡರಾದ ಟಿ.ಜಿ ರಾಜಾರಾಂ ಭಟ್ ಅವರು ದಾನಿಗಳ ನೆರವಿಂದ ಅಶಕ್ತರಿಗಾಗಿ ಆರಂಭಿಸಿದ "ಆಸರೆ" ನೆರವಿನ ಹಸ್ತದ ಎರಡನೇ ಯೋಜನೆಯಡಿ ಗದಗ ಮೂಲದ ದಿ.ಶರಣಪ್ಪ ಅವರ ಕುಟುಂಬಕ್ಕೆ ಸುಸಜ್ಜಿತ ಗ್ರಾನೈಟ್ ನೆಲದ ತಾರಸಿ ಮನೆಯನ್ನ ನಿರ್ಮಿಸಿ ಕೊಟ್ಟಿದ್ದಾರೆ.
ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಗದಗ ಮೂಲದ ದಿ.ಶರಣಪ್ಪ ಅವರ ಮಕ್ಕಳಿಗೆ ನಿರ್ಮಿಸಿದ ಸುಸಜ್ಜಿತ "ಆಸರೆ" ಮನೆಯ ಕೀಲಿ ಕೈಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರು ಶನಿವಾರ ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಅವರು ರಾಜಾರಾಮ್ ಭಟ್ ಅವರ ಕನಸಿನ ಅಶಕ್ತರ ಪಾಲಿನ ಆಶಾಕಿರಣವಾದ ಆಸರೆ ಮನೆಗಳು ದಾನಿಗಳು ಹಾಗೂ ಶ್ರಮಜೀವಿಗಳ ಕೊಡುಗೆ ಎಂದರು. ಪ್ರಸ್ತುತ ನಮ್ಮ ದೇಶದಲ್ಲಿ ಜನರು ಹಕ್ಕು ಮಾತ್ರ ಕೇಳುತ್ತಿದ್ದಾರೆಯೇ ಹೊರತು ತಮ್ಮ ಕರ್ತವ್ಯ, ಜವಬ್ದಾರಿಗಳನ್ನ ಮರೆಯುತ್ತಿದ್ದಾರೆ. ನೆರವಿನ ಆಸರೆಯಂತಹ ಕಾರ್ಯಕ್ರಮಗಳು ಸದಾ ಕಾಲ ಜನಮನ್ನಣೆಗೆ ಪಾತ್ರವಾಗಲಿದೆ ಎಂದರು.





ಆಸರೆ ಯೋಜನೆಯ ಮನೆಗಳ ನಿರ್ಮಾಣದ ರೂವಾರಿ ಟಿ.ಜಿ. ರಾಜಾರಾಂ ಭಟ್ ಮಾತನಾಡಿ, ನಮ್ಮ ಯೋಜನೆಯ ಮೊದಲ ಮನೆಯನ್ನ ನರಿಂಗಾನ ಗ್ರಾಮದ ಅಂಬುಗದ ನಾರಾಯಣ ಪೂಜಾರಿಯವರಿಗೆ ನಿರ್ಮಿಸಿ ಕೊಡಲಾಗಿತ್ತು. ಇದೀಗ ಎರಡನೇ ಮನೆಯನ್ನ ಶರಣಪ್ಪ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ನೂಜಿಪಡ್ಪುವಿನ ಮಾಧವ ಪೂಜಾರಿಯವರಿಗೆ ಮೂರನೇ ಮನೆ, ಚೇಳೂರಿನ ಸುರೇಶ್ ಪೂಜಾರಿಗೆ ನಾಲ್ಕನೇ ಮನೆ ಹಾಗೂ ಐದನೆಯದಾಗಿ ತಲೆಮುಗೇರಿನ ಕಮಲಾ ಪೂಜಾರ್ತಿ ಅವರ ಕುಟುಂಬಕ್ಕೆ ನಿರ್ಮಿಸಿ ಕೊಡಲು ಯೋಜನೆ ರೂಪಿಸಲಾಗಿದೆ. ದಾನಿಗಳ ನೆರವು, ದುಡಿದ ಸಂಬಳ ಪಡೆಯದ ಗುತ್ತಿಗೆದಾರರು, ಶ್ರಮದಾನಗೈದ ಶ್ರಮಜೀವಿಗಳ ನೆರವಿನಿಂದ ನಿರ್ಮಾಣವಾಗುತ್ತಿರುವ ಆಸರೆ ಮನೆಗಳನ್ನ ಇನ್ನಷ್ಟು ನಿರ್ಮಿಸುವ ಮಹಾದಾಸೆ ಇರಿಸಿರುವುದಾಗಿ ಹೇಳಿದರು.



ಆಸರೆ ಯೋಜನೆಯ ಎರಡನೇ ಫಲಾನುಭವಿ ದಿ.ಶರಣಪ್ಪ ಅವರ ಪುತ್ರ ಈಶ್ವರ್ ಮಾತನಾಡಿ, ನಮ್ಮ ಕುಟುಂಬ ಕಳೆದ ಮೂವತ್ತು ವರುಷಗಳಿಂದಲೂ ಇಲ್ಲಿ ನೆಲೆಸಿದೆ. ಇರೋಕೊಂದು ಸ್ವಲ್ಪ ಜಾಗ, ಅದರಲ್ಲಿ ತರ್ಪಾಲಿನ ಜೋಪಡಿಯಲ್ಲಿ ನಮ್ಮ ಕುಟುಂಬ ವಾಸವಿತ್ತು. ರಾಜಾರಾಂ ಭಟ್ ಅವರು ನಮಗೆ ವಾಸ್ತು ಪ್ರಕಾರ, ದೊಡ್ಡವರಂತೆಯೇ ಇರುವ ಸುಸಜ್ಜಿತ ಮನೆ ನಿರ್ಮಿಸಿ ಕೊಟ್ಟಿದ್ದು , ಅವರನ್ನ ಜೀವನ ಪರ್ಯಂತ ನಾವು ಮರೆಯೋದಿಲ್ಲವೆಂದು ಹೇಳಿದರು.
ಕೈರಂಗಳ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಚೌಟ ಉಳಿಪಾಡಿಗುತ್ತು, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.
TJ Raja ram Bhatc constructs story building for the poor family at Ballepuni
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm