ಬ್ರೇಕಿಂಗ್ ನ್ಯೂಸ್
03-09-22 09:53 pm Mangalore Correspondent ಕರಾವಳಿ
ಮಂಗಳೂರು, ಸೆ.3 : ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಕುಡ್ಲದ ಯುವತಿ ದಿವಿತಾ ರೈ ಅವರಿಗೆ ಬಂಟರ ಮಾತೃಸಂಘ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ವಸತಿ ನಿಲಯದ ಅಮೃತೋತ್ಸವ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಸೆಪ್ಟಂಬರ್ 6ರಂದು ಸಂಜೆ ನಾಲ್ಕು ಗಂಟೆಗೆ ನಗರದ ರಾಮಕೃಷ್ಣ ಶಾಲೆ ಆವರಣದ ಗೀತಾ ಎಸ್.ಎಂ. ಶೆಟ್ಟಿ ಮೆಮೋರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೂ ಮುನ್ನ ಜ್ಯೋತಿ ವೃತ್ತದಿಂದ ಸಭಾಂಗಣದ ವರೆಗೆ ಮೆರವಣಿಗೆ ಮೂಲಕ ತುಳುನಾಡ ಸಾಂಪ್ರದಾಯಿಕ ಶೈಲಿಯಲ್ಲಿ ದಿವಿತಾ ರೈ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಗುವುದು ಎಂದರು. ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ದಿವಿತಾ ರೈ ಅವರಿಗೆ ತವರೂರಿನ ಸನ್ಮಾನ ಅತ್ಯಂತ ಮಹತ್ವದ್ದು. ಹಾಗಾಗಿ ತುಳುನಾಡ ಸಂಸ್ಕೃತಿಯನ್ನು ವಿಶ್ವ ಮಟ್ಟದಲ್ಲಿ ಪಸರಿಸುವ ಅಮೋಘ ಕಾರ್ಯಕ್ರಮಕ್ಕೆ ಇದು ಸಾಕ್ಷಿಯಾಗಲಿದೆ. ಬಂಟರ ಸಂಘ ಅನೇಕ ವರ್ಷಗಳಿಂದ ಹೆಣ್ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಉತ್ತೇಜನ ನೀಡುತ್ತಾ ಬಂದಿದೆ. ಇದಕ್ಕೆ ಹೆಣ್ಮಕ್ಕಳಿಗಾಗಿಯೇ ವಿದ್ಯಾರ್ಥಿನಿ ನಿಲಯಗಳನ್ನು ಸ್ಥಾಪಿಸಿ ಅವರಿಗೆ ಸೂಕ್ತ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಕಾಕತಾಳೀಯ ಎನ್ನುವಂತೆ ಈ ಬಾರಿಯ ಸ್ಪರ್ಧೆಯಲ್ಲಿ ದಿವಿತಾ ರೈ, ಜಾಗತಿಕ ಸವಾಲುಗಳಲ್ಲೊಂದಾದ ಹೆಣ್ಣು ಮಕ್ಕಳ ಶಿಕ್ಷಣದ ಕುರಿತು ಮಾತನಾಡಲಿರುವುದು ಬಂಟರಿಗೆ ಹೆಮ್ಮೆ ತರುವ ವಿಷಯ ಎಂದು ಅವರು ಹೇಳಿದರು. ಬಂಟರ ಸಂಘ ಕೇವಲ ಬಂಟ ಸಮುದಾಯದ ಪ್ರತಿಭೆಗಳನ್ನು ಮಾತ್ರವಲ್ಲದೆ ತುಳುನಾಡಿನ ಎಲ್ಲಾ ಸಮುದಾಯದ ಪ್ರತಿಭೆಗಳನ್ನು ಗುರುತಿಸಿ, ಗೌರವಿಸುವ ಕಾರ್ಯವನ್ನು ನಡೆಸುತ್ತಾ ಬಂದಿದೆ. ಮುಂದೆಯೂ ಈ ಪರಂಪರೆಯನ್ನು ಮುಂದುವರಿಸಲಾಗುವುದು ಎಂದರು.
ದಿವಿತಾ ರೈ ಪರಿಚಯ

ಮೂಲತಃ ಮಂಗಳೂರಿನ ನಿವಾಸಿಗಳಾದ, ಸದ್ಯ ಮುಂಬೈನಲ್ಲಿ ನೆಲೆಸಿರುವ ದಿಲೀಪ್ ರೈ ಹಾಗೂ ಪವಿತ್ರಾ ರೈ ದಂಪತಿಯ ಪುತ್ರಿ. ಈಕೆ ಜನಿಸಿದ್ದು ಮಂಗಳೂರಿನಲ್ಲಿ ; ಬೆಳೆದಿದ್ದು ಮುಂಬೈನಲ್ಲಿ. ವಾಸ್ತುಶಿಲ್ಪ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಪರಿಣತಿ ಪಡೆದಿರುವ ಇವರು ಮುಂಬೈನ ಸರ್ ಜೆ.ಜೆ. ಕಾಲೇಜ್ ಆಫ್ ಆರ್ಕಿಟೆಕ್ಚರ್ನಲ್ಲಿ ಪದವೀಧರೆ. ಬ್ಯಾಡ್ಮಿಂಟನ್, ಬಾಸ್ಕೆಟ್ಬಾಲ್, ಚಿತ್ರಕಲೆ, ಸಂಗೀತ ಕೇಳುವುದು ಮತ್ತು ಓದುವುದು ಇವರ ಹವ್ಯಾಸಗಳು. ಇವರ ಅಣ್ಣ ದೈವಿಕ್ ರೈ ಕೂಡ ಪ್ರತಿಭಾವಂತ. ಭಾರತದ ಒಳಾಂಗಣ ಕ್ರಿಕೆಟ್ ತಂಡದ ಸದಸ್ಯರಾಗಿರುವ ಇವರು 2017ರ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತದ ತಂಡದಲ್ಲಿದ್ದರು.
_1661743565919_1661743691434_1661743691434.jpg)
ಸುದ್ದಿಗೋಷ್ಟಿಯಲ್ಲಿ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಅಮೃತೋತ್ಸವ ಸಮಿತಿ ಅಧ್ಯಕ್ಷೆ ವೀಣಾ ಟಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಯನಾ ಶೆಟ್ಟಿ, ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಸಂಚಾಲಕಿ ಶಾಲಿನಿ ಶೆಟ್ಟಿ, ಕೋಶಾಧಿಕಾರಿ ಸವಿತಾ ಚೌಟ ಉಪಸ್ಥಿತರಿದ್ದರು.
Divita Rai crowned Miss Diva Universe 2022 to be facilitated in her home town Mangalore by Bunts community.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm