ಬ್ರೇಕಿಂಗ್ ನ್ಯೂಸ್
06-09-22 11:09 am Mangalore Correspondent ಕರಾವಳಿ
ಮಂಗಳೂರು, ಸೆ.6 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದಿಢೀರ್ ಆಗಿ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಪುತ್ತೂರು, ಉಪ್ಪಿನಂಗಡಿ ಮತ್ತು ಸುಳ್ಯ ಭಾಗದ ಹಲವು ಕಡೆ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಲಾಗಿದೆ. ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮನೆ ಹಾಗು ಕಚೇರಿಗಳ ಮೇಲೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆರೋಪಿಗಳು ಕೃತ್ಯ ಎಸಗಿದ ಬಳಿಕ ಅಡಗಿಕೊಳ್ಳಲು ಸಹಕಾರ ನೀಡಿದವರು, ಬೇರೆ ಬೇರೆ ಕಡೆಗೆ ತೆರಳಲು ಹಣಕಾಸು ನೆರವು ನೀಡಿದವರ ಬಗ್ಗೆ ಈಗಾಗಲೇ ಪೊಲೀಸರು ಮಾಹಿತಿ ಸಂಗ್ರಹಿಸಿ ಎನ್ಐಎ ತಂಡಕ್ಕೆ ನೀಡಿದ್ದಾರೆ. ಈ ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಆರೋಪಿಗಳಿಗೆ ನೆರವು ಒದಗಿಸಿದವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಆಗಸ್ಟ್ ಕೊನೆಯಲ್ಲಿ ಆರೋಪಿಗಳ ಪೈಕಿ ಪ್ರಮುಖ ಮೂವರನ್ನು ವಶಕ್ಕೆ ಪಡೆದಿದ್ದ ಎನ್ಐಎ ತಂಡ, ವಿಚಾರಣೆ ನಡೆಸಿ ಮತ್ತೆ ಕೋರ್ಟಿಗೆ ಹಾಜರುಪಡಿಸಿದ್ದರು. ಆನಂತರ, ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರಿಂದ ಸದ್ಯ ಹತ್ತು ಮಂದಿ ಆರೋಪಿಗಳು ಮಂಗಳೂರಿನ ಜೈಲಿನಲ್ಲಿದ್ದಾರೆ.
Sleuths of National Investigation Agency (NIA), who are investigating the murder case of youth BJP leader of Sullia Praveen Nettaru, raided 32 houses, buildings in Puttur and Sullia, early in the morning on Tuesday September 6. It is learnt that they interrogated accused and those who cooperated with the accused. Karnataka police also accompanied the NIA sleuths in the operation.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm