ಬ್ರೇಕಿಂಗ್ ನ್ಯೂಸ್
06-09-22 11:54 am Mangalore Correspondent ಕರಾವಳಿ
ಉಳ್ಳಾಲ, ಆ.6 : ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ(40) ಕಣಜದ ಹುಳುವಿನ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜಿತನ್ ಅವರು ವೃತ್ತಿಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿ(7)ಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿವೆ.

ಪ್ರವೀಣ್ ತಲೆಗೆ ಹುಳಗಳು ಕಚ್ಚಿ ಗಾಯಗೊಳಿಸಿದ್ದು ಅವರ ಪುಟ್ಟ ಮಗಳು ಧೃತಿಗೂ ಗಾಯಗಳಾಗಿದ್ದು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಅವರು ಅಪಾಯಕಾರಿ ಕಣಜದ ಗೂಡನ್ನ ತೆರವುಗೊಳಿಸುವುದಾಗಿ ಹೇಳಿದ್ದಾರೆ.
Mangalore Blister beetle insect attack three injured in Ullal.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm