ಬ್ರೇಕಿಂಗ್ ನ್ಯೂಸ್
06-09-22 11:54 am Mangalore Correspondent ಕರಾವಳಿ
ಉಳ್ಳಾಲ, ಆ.6 : ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ(40) ಕಣಜದ ಹುಳುವಿನ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜಿತನ್ ಅವರು ವೃತ್ತಿಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿ(7)ಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿವೆ.

ಪ್ರವೀಣ್ ತಲೆಗೆ ಹುಳಗಳು ಕಚ್ಚಿ ಗಾಯಗೊಳಿಸಿದ್ದು ಅವರ ಪುಟ್ಟ ಮಗಳು ಧೃತಿಗೂ ಗಾಯಗಳಾಗಿದ್ದು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಅವರು ಅಪಾಯಕಾರಿ ಕಣಜದ ಗೂಡನ್ನ ತೆರವುಗೊಳಿಸುವುದಾಗಿ ಹೇಳಿದ್ದಾರೆ.
Mangalore Blister beetle insect attack three injured in Ullal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm