ಬ್ರೇಕಿಂಗ್ ನ್ಯೂಸ್
06-09-22 10:30 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಣಿಪಾಲ್ ಗ್ರೂಪ್ ಆಫ್ ಗ್ಲೋಬಲ್ ಎಜುಕೇಶನ್ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ, ಹೆಸರಾಂತ ಉದ್ಯಮಿ ಟಿವಿ ಮೋಹನದಾಸ್ ಪೈ ಅವರ ತಾಯಿ ವಿಮಲಾ ಪೈ ನಿಧನರಾಗಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದವರಾದ ವಿಮಲಾ ಪೈ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದರು. 1956ರಲ್ಲಿ ಮಂಗಳೂರಿನ ಟಿ ವೆಂಕಟರಮಣ ಪೈ ಅವರನ್ನು ವಿವಾಹವಾಗಿದ್ದರು. ಕರ್ನಾಟಕದ ವಿವಿಧೆಡೆ 35 ವರ್ಷಗಳ ಕಾಲ ಶಿಕ್ಷಕಿಯಾಗಿದ್ದು ನಿವೃತ್ತರಾಗಿದ್ದರು. ಇವರಿಗೆ ಟಿವಿ ಮೋಹನದಾಸ್ ಪೈ, ರಾಮಚಂದ್ರ ಪೈ ಮತ್ತು ಸುಧಾ ಪೈ ಎಂಬ ಮೂವರು ಮಕ್ಕಳಿದ್ದಾರೆ. ಪತಿಯ ಜೊತೆಗೆ ಸುದೀರ್ಘ ಅವಧಿಯಿಂದ ಬೆಂಗಳೂರಿನಲ್ಲೇ ನೆಲೆಸಿದ್ದರು. ಮಕ್ಕಳ ಪೈಕಿ ಮೋಹನದಾಸ್ ಪೈ ವಿಶೇಷ ಸಾಧನೆ ಮಾಡಿದ್ದಾರೆ.

ವಿಮಲಾ ಪೈ ಉದಾರ ದಾನಿಗಳಾಗಿದ್ದರು. ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದ್ದರು. ಅವರ ಪತಿ ಟಿವಿ ರಮಣ ಪೈ ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿದ್ದರು. ಅವರ ಸ್ಮರಣಾರ್ಥ ತಾಯಿ ವಿಮಲಾ ಪೈಯವರ ಆಸೆಯಂತೆ, ಮಂಗಳೂರಿನಲ್ಲಿ ಟಿವಿ ರಮಣ ಪೈ ಸಭಾಂಗಣ ನಿರ್ಮಿಸಿದ್ದ ಮೋಹನದಾಸ ಪೈ, ಅದನ್ನು ಕೆನರಾ ಸಂಸ್ಥೆಗೆ ಬಿಟ್ಟು ಕೊಟ್ಟಿದ್ದರು.
ವಿಮಲಾ ಪೈ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಚಿರಸ್ಮರಣೀಯವಾಗಿವೆ. ಅವರ ಅಗಲಿಕೆಯ ಹಿನ್ನಲೆಯಲ್ಲಿ ಅವರ ಸಾಧನೆ, ಕೊಡುಗೆಗಳನ್ನು ಸ್ಮರಿಸಿ ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Mangalore Padma Shri Awardee Mohandas Pai mother Vimala passes away. She was a teacher for about 35 years. T. V. Mohandas Pai is a Padma Shri Awardee and current Chairman of Manipal Global Education. He was a former director of Infosys, and Head – Administration, Education and Research, Financial, Human Resources of Infosys Leadership Institute
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am