ಬ್ರೇಕಿಂಗ್ ನ್ಯೂಸ್
06-09-22 10:30 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಣಿಪಾಲ್ ಗ್ರೂಪ್ ಆಫ್ ಗ್ಲೋಬಲ್ ಎಜುಕೇಶನ್ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ, ಹೆಸರಾಂತ ಉದ್ಯಮಿ ಟಿವಿ ಮೋಹನದಾಸ್ ಪೈ ಅವರ ತಾಯಿ ವಿಮಲಾ ಪೈ ನಿಧನರಾಗಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದವರಾದ ವಿಮಲಾ ಪೈ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದರು. 1956ರಲ್ಲಿ ಮಂಗಳೂರಿನ ಟಿ ವೆಂಕಟರಮಣ ಪೈ ಅವರನ್ನು ವಿವಾಹವಾಗಿದ್ದರು. ಕರ್ನಾಟಕದ ವಿವಿಧೆಡೆ 35 ವರ್ಷಗಳ ಕಾಲ ಶಿಕ್ಷಕಿಯಾಗಿದ್ದು ನಿವೃತ್ತರಾಗಿದ್ದರು. ಇವರಿಗೆ ಟಿವಿ ಮೋಹನದಾಸ್ ಪೈ, ರಾಮಚಂದ್ರ ಪೈ ಮತ್ತು ಸುಧಾ ಪೈ ಎಂಬ ಮೂವರು ಮಕ್ಕಳಿದ್ದಾರೆ. ಪತಿಯ ಜೊತೆಗೆ ಸುದೀರ್ಘ ಅವಧಿಯಿಂದ ಬೆಂಗಳೂರಿನಲ್ಲೇ ನೆಲೆಸಿದ್ದರು. ಮಕ್ಕಳ ಪೈಕಿ ಮೋಹನದಾಸ್ ಪೈ ವಿಶೇಷ ಸಾಧನೆ ಮಾಡಿದ್ದಾರೆ.
ವಿಮಲಾ ಪೈ ಉದಾರ ದಾನಿಗಳಾಗಿದ್ದರು. ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದ್ದರು. ಅವರ ಪತಿ ಟಿವಿ ರಮಣ ಪೈ ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿದ್ದರು. ಅವರ ಸ್ಮರಣಾರ್ಥ ತಾಯಿ ವಿಮಲಾ ಪೈಯವರ ಆಸೆಯಂತೆ, ಮಂಗಳೂರಿನಲ್ಲಿ ಟಿವಿ ರಮಣ ಪೈ ಸಭಾಂಗಣ ನಿರ್ಮಿಸಿದ್ದ ಮೋಹನದಾಸ ಪೈ, ಅದನ್ನು ಕೆನರಾ ಸಂಸ್ಥೆಗೆ ಬಿಟ್ಟು ಕೊಟ್ಟಿದ್ದರು.
ವಿಮಲಾ ಪೈ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಚಿರಸ್ಮರಣೀಯವಾಗಿವೆ. ಅವರ ಅಗಲಿಕೆಯ ಹಿನ್ನಲೆಯಲ್ಲಿ ಅವರ ಸಾಧನೆ, ಕೊಡುಗೆಗಳನ್ನು ಸ್ಮರಿಸಿ ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Mangalore Padma Shri Awardee Mohandas Pai mother Vimala passes away. She was a teacher for about 35 years. T. V. Mohandas Pai is a Padma Shri Awardee and current Chairman of Manipal Global Education. He was a former director of Infosys, and Head – Administration, Education and Research, Financial, Human Resources of Infosys Leadership Institute
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm