ಬ್ರೇಕಿಂಗ್ ನ್ಯೂಸ್
07-09-22 10:40 am Mangalore Correspondent ಕರಾವಳಿ
ಉಳ್ಳಾಲ, ಆ.6 : ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಕಣಜದ ಹುಳು ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಉಳ್ಳಾಲ ಬೈಲಿನ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಮಗಳನ್ನ ಶಾಲೆಗೆ ಬಿಡುತ್ತಿದ್ದ ವ್ಯಕ್ತಿಯೂ ನೊಣಗಳ ದಾಳಿಯಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ(38) ಮೃತ ದುರ್ದೈವಿ. ಜಿತನ್ ಅವರು ಮಂಗಳವಾರ ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ನೂರಕ್ಕೂ ಅಧಿಕ ಕಣಜದ ಹುಳುಗಳು ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿದ್ದವು. ಇಷ್ಟಲ್ಲದೆ ರಸ್ತೆಯಲ್ಲಿ ಶಾಲಾ ವಾಹನದ ಕಡೆ ತೆರಳುತ್ತಿದ್ದ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿ(7)ಗೂ ನೊಣಗಳು ಕಚ್ಚಿ ಗಾಯಗೊಳಿಸಿದ್ದವು.


ಗಂಭೀರ ಗಾಯಗೊಂಡಿದ್ದ ಜಿತನ್ ಅವರನ್ನ ಮಂಗಳೂರಿನ ಫಾಧರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಸಾವನ್ನಪ್ಪಿದ್ದಾರೆ. ಪ್ರವೀಣ್ ಮತ್ತು ಅವರ ಮಗಳು ಧೃತಿಗೂ ನೊಣಗಳು ಗಾಯಗೊಳಿಸಿದ್ದು ಇಬ್ಬರೂ ತೊಕ್ಕೊಟ್ಟಿನ ಸಹರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದರು. ಸಂಜೆ ಆಗುತ್ತಿದ್ದಂತೆ ತಲೆಗೆ ನೊಣಗಳಿಂದ ಕಡಿಸಿಕೊಂಡಿದ್ದ ಪ್ರವೀಣ್ ಅವರೂ ವಾಂತಿ ಮಾಡಲು ಆರಂಭಿಸಿದ್ದು ಗಂಭೀರಗೊಂಡ ಅವರನ್ನೂ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಮೃತ ಜಿತನ್ ಅವರು ಮೂಲತಃ ಮಂಗಳೂರಿನ ನೀರುಮಾರ್ಗದವರು. ಉಳ್ಳಾಲ ಬೈಲಿನ ನಿವಾಸಿ ರೋಹಿತ ಬ್ರಾಕ್ಸ್ ಅವರು ವಿಚ್ಚೇದಿತೆಯಾಗಿದ್ದು ಆಕೆಯನ್ನು ಜಿತನ್ ಅವರು ಮದುವೆಯಾಗಿ ಎರಡನೇ ಜೀವನ ನೀಡಿದ್ದರು. ದಂಪತಿಗೆ ಎರಡು ಗಂಡು ಮಕ್ಕಳಿದ್ದು ಪತ್ನಿ ರೋಹಿತ ಸದ್ಯ 6 ತಿಂಗಳ ಗರ್ಭಿಣಿಯಾಗಿದ್ದಾರೆ. ಗಂಡನ ಸಾವಿನ ಸುದ್ದಿ ಕೇಳಿ ರೋಹಿತ ಆಘಾತಕ್ಕೊಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಚೇತರಿಸಿದ್ದಾರೆ. ಉಳ್ಳಾಲ ಬೈಲಿನ ಸಣ್ಣ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಡ ಕುಟುಂಬಕ್ಕೆ ಜಿತನ್ ಅವರೇ ಆಧಾರ ಸ್ತಂಭವಾಗಿದ್ದರು.
ತೊಕ್ಕೊಟ್ಟು ; ಕಣಜದ ಹುಳಗಳ ದಾಳಿ, ತೆಂಗಿನ ಕಾಯಿ ಕೀಳುತ್ತಿದ್ದ ವ್ಯಕ್ತಿ ಗಂಭೀರ, ತಂದೆ, ಮಗಳು ಅಪಾಯದಿಂದ ಪಾರು
Mangalore Bettle insect attack one in critical condition dies, two in serious condition in Ullal.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am