ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm