ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm