ಬ್ರೇಕಿಂಗ್ ನ್ಯೂಸ್
07-09-22 10:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಎಮ್ಆರ್ ಪಿಎಲ್, ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯುಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ವಿರುದ್ಧ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ಬೈಕಂಪಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಪರಿಸರ ಮಾಲಿನ್ಯ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಬೃಹತ್ ಕೈಗಾರಿಕೆಗಳ ಅಡಿಯಾಳಾಗಿ ಅಕ್ರಮಗಳನ್ನು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ಇದರಿಂದಾಗಿ ಜೋಕಟ್ಟೆ, ಬಜ್ಪೆ, ಬೈಕಂಪಾಡಿ, ಸುರತ್ಕಲ್ ಮುಂತಾದ ಕೈಗಾರಿಕಾ ಬಾಹುಳ್ಯ ಪ್ರದೇಶಗಳು ಗಂಭೀರ ಕೈಗಾರಿಕಾ ಮಾಲಿನ್ಯಕ್ಕೆ ಗುರಿಯಾಗಿದ್ದು ಜನರ ಆರೋಗ್ಯಕ್ಕೆ ಕಂಟಕ ಎದುರಾಗಿದೆ ಎಂದು ಆರೋಪಿಸಿದರು.



ಸರಕಾರದ ಆದೇಶದ ಹೊರತಾಗಿಯು ಹಸಿರು ವಲಯ ನಿರ್ಮಾಣಕ್ಕಾಗಿ ಎಂ ಆರ್ ಪಿ ಎಲ್ 27 ಎಕರೆ ಭೂಸ್ವಾಧೀನಕ್ಕೆ ಸಹಕರಿಸುತ್ತಿಲ್ಲ. 33 ಶೇಕಡಾ ಜಮೀನಿನಲ್ಲಿ ಹಸಿರು ವಲಯ ನಿರ್ಮಿಸದಿರುವುದು ಕಂಪೆನಿಗೆ ಬೀಗ ಜಡಿಯುವ ಅಪರಾಧವಾದರೂ ಮಾಲಿನ್ಯ ನಿಯಂತ್ರಣ ಮಂಡಳಿ ಎಂ ಆರ್ ಪಿಎಲ್ ಅಧಿಕಾರಿಗಳಿಗೆ ವಿಧೇಯವಾಗಿ ನಡೆದುಕೊಳ್ಳುತ್ತಿದೆ. ಗೌತಮ್ ಅದಾನಿಯ ವಿಲ್ಮಾ, ಬಾಬಾ ರಾಮ್ ದೇವ್ ಒಡೆತನದ ರುಚಿಗೋಲ್ಡ್ ಮತ್ತಿತರ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬೃಹತ್ ಕಂಪೆನಿಗಳ ಮಾಲಿನ್ಯದಿಂದ ಫಲ್ಗುಣಿ ನದಿ ವಿಷಮಯ ಆಗುತ್ತಿದ್ದರೂ ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಣು ಮುಚ್ಚಿ ಕೂತಿದೆ. ಈ ಕುರಿತು ಹದಿನೈದು ದಿನಗಳ ಅಂತರದಲ್ಲಿ ಎರಡು ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದೆ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇಂತಹ ಹೊಣೆಗೇಡಿತನದ ವಿರುದ್ದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.




ಮಾಜಿ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಆರಂಭದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆಯನ್ನು ಬೈಕಂಪಾಡಿ ಜಂಕ್ಷನ್ ನಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿ ವರಗೆ ನಡೆಸಲಾಯಿತು. ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಿ ಎಸ್ ಬಶೀರ್, ಹೋರಾಟ ಸಮಿತಿ ಸಹ ಸಂಚಾಲಕ ಅಬೂಬಕ್ಕರ್ ಬಾವ, ಗ್ರಾಪಂ ಸದಸ್ಯೆ ಜುಬೇದಾ, ಮನೋಜ್ ಜೋಕಟ್ಟೆ, ಶ್ರೀನಿವಾಸ್, ಸುರೇಂದ್ರ ಜೋಕಟ್ಟೆ, ಶೇಖರ್ ನಿರ್ಮುಂಜೆ, ಇಕ್ಬಾಲ್ ಜೋಕಟ್ಟೆ, ಚಂದ್ರ ಶೇಖರ್, ಸಿಲ್ವಿಯಾ, ಯಮುನಾ ಕೆಂಜಾರು, ಹನೀಫ್ ಜೋಕಟ್ಟೆ, ರಾಜು ಜೋಕಟ್ಟೆ, ಲಾನ್ಸಿ ಜೋಕಟ್ಟೆ, ದೊಂಬಯ್ಯ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Protest by DYFI against MRPL over pollution of deadly chemicals in the air.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm