ಭೂಮಿಪೂಜೆ ಹಿನ್ನೆಲೆ ; ಆಗಸ್ಟ್ 5 ರಂದು ಮಂಗಳೂರಿನಲ್ಲಿ ನಿಷೇಧಾಜ್ಞೆ 

03-08-20 02:45 pm       Mangalore Reporter   ಕರಾವಳಿ

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆ ನಡೆಯುವ ಆಗಸ್ಟ್ 5ರಂದು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಕಮಿಷನರ್ ವಿಕಾಶ್ ಕುಮಾರ್ ಆದೇಶ ಮಾಡಿದ್ದಾರೆ. 

ಮಂಗಳೂರು, ಆಗಸ್ಟ್ 3: ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆ ನಡೆಯುವ ಆಗಸ್ಟ್ 5ರಂದು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಕಮಿಷನರ್ ವಿಕಾಶ್ ಕುಮಾರ್ ಆದೇಶ ಮಾಡಿದ್ದಾರೆ. 

ಅತ್ತ ಮಂದಿರಕ್ಕೆ ಭೂಮಿಪೂಜೆ ನಡೆಯುತ್ತಿದ್ದಂತೆ ಹಿಂದು ಸಂಘಟನೆಗಳು ಹರ್ಷಾಚರಣೆಗೆ ತಯಾರಿ ನಡೆಸಿದ್ದವು. ಇದೇ ವೇಳೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುವ ಮಾಹಿತಿಯೂ ಪೊಲೀಸರಿಗೆ ಲಭಿಸಿತ್ತು. ಹೀಗಾಗಿ ಯಾವುದೇ ರೀತಿಯಲ್ಲೂ ಜನ ಗುಂಪು ಕೂಡದಂತೆ ಸೆಕ್ಷನ್ ಹೇರಲಾಗಿದೆ. 

ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಸೆಕ್ಷನ್ ಉಲ್ಲಂಘಿಸಿದರೆ ಬಂಧಿಸುವಂತೆ ಕಮಿಷನರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.