ಬ್ರೇಕಿಂಗ್ ನ್ಯೂಸ್
12-09-22 09:18 pm Mangalore Correspondent ಕರಾವಳಿ
ಮಂಗಳೂರು, ಸೆ.12: ಸುರತ್ಕಲ್ ಟೋಲ್ ಗೇಟ್ ತೆರವು ಮಾಡಲಾಗುತ್ತದೆ ಎಂದು ಜನರನ್ನು ನಂಬಿಸಿಕೊಂಡು ಬಂದ ಶಾಸಕ, ಸಂಸದರಿಗೆ ಬಿಸಿ ಮುಟ್ಟಿಸಲು ಸ್ಥಳೀಯರು ರೆಡಿಯಾಗುತ್ತಿದ್ದಾರೆ. ಟೋಲ್ ಗೇಟ್ ತೆರವಿನ ಬಗ್ಗೆ ನಿಶ್ಚಿತ ದಿನಾಂಕ ಘೋಷಣೆ ಮಾಡಬೇಕು ಎಂದು ಸುರತ್ಕಲ್ ಟೋಲ್ ಗೇಟ್ ಮುಂದೆ ಸೆ.13ರಂದು ಒಂದು ದಿನದ ಸತ್ಯಾಗ್ರಹ ನಡೆಸಲಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಸೇರಿ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ಬಳಿ ಸಾಮೂಹಿಕ ಧರಣಿ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಕಳೆದ ಹತ್ತು ದಿನಗಳಿಂದ ಸಿದ್ಧತೆ ನಡೆಸಲಾಗಿದೆ. ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಪುರುಷೋತ್ತಮ ಚಿತ್ರಾಪುರ ಸೇರಿದಂತೆ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರು ವಿವಿಧೆಡೆ ಸಭೆಯನ್ನೂ ನಡೆಸಿದ್ದಾರೆ.

ಕಳೆದ ನಾಲ್ಕು ವರ್ಷಗಳ ಹಿಂದೆಯೇ ಟೋಲ್ ಗೇಟನ್ನು ತೆರವುಗೊಳಿಸಿ, ಹೆಜಮಾಡಿ ಟೋಲ್ ಗೇಟ್ ಜೊತೆಗೆ ವಿಲೀನ ಮಾಡುವ ಬಗ್ಗೆ ರಾಜ್ಯ ಸರಕಾರ ನಿರ್ಣಯ ಕೈಗೊಂಡಿತ್ತು. ಆದರೆ, ಇದನ್ನು ಕಾರ್ಯಗತಗೊಳಿಸಲು ಸ್ಥಳೀಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ತಾತ್ಕಾಲಿಕ ನೆಪದಲ್ಲಿ ಆರಂಭಿಸಿದ್ದ ಟೋಲ್ ಗೇಟನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದು, ಜನರನ್ನು ನೇರವಾಗಿ ಲೂಟಿ ಮಾಡಲಾಗುತ್ತಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಸಂಸತ್ತಿನಲ್ಲಿ ಮಾತನಾಡಿದ್ದ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, 60 ಕಿಮೀ ಒಳಗಿನ ಎಲ್ಲ ಟೋಲ್ ಗೇಟ್ ಗಳನ್ನು ತೆರವುಗೊಳಿಸಲಾಗುವುದು ಎಂದು ಹೇಳಿದ್ದರು. ಅದರಂತೆ, ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಾಗುವ ಬಗ್ಗೆ ಮಾತುಗಳು ಕೇಳಿಬಂದಿದ್ದವು.

ಈ ನಡುವೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಎನ್ಎಂಪಿಟಿ ಒಳಗಡೆ ಟೋಲ್ ಗೇಟ್ ಸ್ಥಳಾಂತರಿಸುವ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ. ಸದ್ಯದಲ್ಲೇ ಸುರತ್ಕಲ್ ಟೋಲ್ ಗೇಟ್ ತೆರವಾಗುತ್ತದೆ ಎಂದು ಪತ್ರಕರ್ತರ ಪ್ರಶ್ನೆಗೆ ಮಾಹಿತಿ ನೀಡಿದ್ದರು. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ. ಇದರ ನಡುವಲ್ಲೇ ಟೋಲ್ ಗೇಟ್ ಗುತ್ತಿಗೆಯನ್ನು ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡಲಾಗಿತ್ತು. ಸಂಸದ ನಳಿನ್ ಕುಮಾರ್, ಶಾಸಕ ಭರತ್ ಶೆಟ್ಟಿಯ ವಿರುದ್ಧ ಸ್ಥಳೀಯರ ಆಕ್ರೋಶ ಎದ್ದಿದ್ದರೂ, ಅದನ್ನು ನಿರ್ಲಕ್ಷಿಸುತ್ತಾ ಬರಲಾಗಿದೆ. ಹೀಗಾಗಿ ಇದೀಗ ಮತ್ತೆ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಾಮೂಹಿಕ ಧರಣಿ ಹಮ್ಮಿಕೊಳ್ಳಲಾಗಿದೆ. ಟೋಲ್ ಗೇಟ್ ತೆರವು ಮಾಡುವ ಬಗ್ಗೆ ಜಿಲ್ಲಾಡಳಿತ ದಿನಾಂಕ ಘೋಷಣೆ ಮಾಡದೇ ಇದ್ದಲ್ಲಿ ಇದೇ ದಿನ ಟೋಲ್ ಗೇಟ್ ತೆರವುಗೊಳಿಸುವ ಬಗ್ಗೆ ದಿನಾಂಕ ಘೋಷಿಸುತ್ತೇವೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.
Mangalore Surathkal toll gate, DYFI to sit dharna as toll gate still not vacated from spot even after promises.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am