ಬ್ರೇಕಿಂಗ್ ನ್ಯೂಸ್
08-10-20 09:53 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್. 08 : ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ತುಳು ಸಾಹಿತಿ, ತುಳು ಸಂಘಟಕ ಶಿವಾನಂದ ಕರ್ಕೇರ (73) ತಮ್ಮ ಮನೆಯಲ್ಲಿ ಮಹಡಿಯಿಂದ ಜಾರಿ ಬಿದ್ದು ನಿಧನರಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಶಿವಾನಂದ ಕರ್ಕೇರ ಅವರು ಪಾಂಡೇಶ್ವರದ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿದ್ದು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕೆಳಗೆ ಬಿದ್ದಿದ್ದು ಹೇಗೆ ಎನ್ನುವುದು ಸರಿಯಾಗಿ ಯಾರಿಗೂ ಗೊತ್ತಿಲ್ಲ. ಅಪಾರ್ಟ್ಮೆಂಟ್ ಗೇಟ್ ಹೊರ ಭಾಗದಲ್ಲಿ ಕರ್ಕೇರ ಅವರು ಬಿದ್ದಿರುವುದನ್ನು ಪಕ್ಕದ ಮನೆಯ ಮಗುವೊಂದು ನೋಡಿ, ಹೆತ್ತವರಿಗೆ ತಿಳಿಸಿದೆ. ಕೂಡಲೇ ಅವರನ್ನು ಸ್ಥಳೀಯರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ,ಅದಾಗಲೇ ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧಿಕಾರಿಯಾಗಿದ್ದ ಕರ್ಕೇರ ಅವರು, ನಿವೃತ್ತಿ ಬಳಿಕ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ತುಳು ನಾಟಕ, ಕವನ ಬರೆಯುವ ಹವ್ಯಾಸ ಹೊಂದಿದ್ದರು. ಇವರು ಕಡಲ್ ಕವಿತಾ ಸಂಕಲನ ಮತ್ತು ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ಗೋಕರ್ಣನಾಥ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಯಕ್ಷಾಂಗಣದ ಸ್ಥಾಪಕ ಉಪಾಧ್ಯಕ್ಷರು ಆಗಿದ್ದರು. ಇವರು ತುಳು ಅಕಾಡೆಮಿ ಸದಸ್ಯರಾಗಿದ್ದ ಅವಧಿಯಲ್ಲಿ ತುಳು ಭಾಷೆಯಲ್ಲಿ ಮೊದಲ ಬಾರಿಗೆ ಎಂಎ ಸ್ನಾತಕೋತ್ತರ ಪದವಿ ಆರಂಭಗೊಂಡಿತ್ತು. ಮೊದಲ ಬ್ಯಾಚಿನಲ್ಲಿ ತುಳು ಎಂ.ಎ. ವಿದ್ಯಾರ್ಥಿಯಾಗಿ ಸೇರಿದ್ದಲ್ಲದೆ ತುಳು ಕಲಿಯಬೇಕೆಂಬ ನೆಲೆಯಲ್ಲಿ ಕಿರಿಯರಿಗೆ ಪ್ರೋತ್ಸಾಹ ತುಂಬುತ್ತಿದ್ದರು. ಆರೋಗ್ಯದಲ್ಲಿ ತುಂಬು ಜವ್ವನ ಹೊಂದಿದ್ದ ಕರ್ಕೇರ ಅವರು, ಹಠಾತ್ ನಿಧನರಾಗಿರುವುದು ಅವರ ಆಪ್ತರಲ್ಲಿ ಮತ್ತು ತುಳು ಸಂಘಟಕರಲ್ಲಿ ದಿಗ್ಭ್ರಮೆ ಮೂಡಿಸಿದೆ
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm