ಬ್ರೇಕಿಂಗ್ ನ್ಯೂಸ್
08-10-20 09:53 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್. 08 : ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ತುಳು ಸಾಹಿತಿ, ತುಳು ಸಂಘಟಕ ಶಿವಾನಂದ ಕರ್ಕೇರ (73) ತಮ್ಮ ಮನೆಯಲ್ಲಿ ಮಹಡಿಯಿಂದ ಜಾರಿ ಬಿದ್ದು ನಿಧನರಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಶಿವಾನಂದ ಕರ್ಕೇರ ಅವರು ಪಾಂಡೇಶ್ವರದ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿದ್ದು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕೆಳಗೆ ಬಿದ್ದಿದ್ದು ಹೇಗೆ ಎನ್ನುವುದು ಸರಿಯಾಗಿ ಯಾರಿಗೂ ಗೊತ್ತಿಲ್ಲ. ಅಪಾರ್ಟ್ಮೆಂಟ್ ಗೇಟ್ ಹೊರ ಭಾಗದಲ್ಲಿ ಕರ್ಕೇರ ಅವರು ಬಿದ್ದಿರುವುದನ್ನು ಪಕ್ಕದ ಮನೆಯ ಮಗುವೊಂದು ನೋಡಿ, ಹೆತ್ತವರಿಗೆ ತಿಳಿಸಿದೆ. ಕೂಡಲೇ ಅವರನ್ನು ಸ್ಥಳೀಯರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ,ಅದಾಗಲೇ ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧಿಕಾರಿಯಾಗಿದ್ದ ಕರ್ಕೇರ ಅವರು, ನಿವೃತ್ತಿ ಬಳಿಕ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ತುಳು ನಾಟಕ, ಕವನ ಬರೆಯುವ ಹವ್ಯಾಸ ಹೊಂದಿದ್ದರು. ಇವರು ಕಡಲ್ ಕವಿತಾ ಸಂಕಲನ ಮತ್ತು ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ಗೋಕರ್ಣನಾಥ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಯಕ್ಷಾಂಗಣದ ಸ್ಥಾಪಕ ಉಪಾಧ್ಯಕ್ಷರು ಆಗಿದ್ದರು. ಇವರು ತುಳು ಅಕಾಡೆಮಿ ಸದಸ್ಯರಾಗಿದ್ದ ಅವಧಿಯಲ್ಲಿ ತುಳು ಭಾಷೆಯಲ್ಲಿ ಮೊದಲ ಬಾರಿಗೆ ಎಂಎ ಸ್ನಾತಕೋತ್ತರ ಪದವಿ ಆರಂಭಗೊಂಡಿತ್ತು. ಮೊದಲ ಬ್ಯಾಚಿನಲ್ಲಿ ತುಳು ಎಂ.ಎ. ವಿದ್ಯಾರ್ಥಿಯಾಗಿ ಸೇರಿದ್ದಲ್ಲದೆ ತುಳು ಕಲಿಯಬೇಕೆಂಬ ನೆಲೆಯಲ್ಲಿ ಕಿರಿಯರಿಗೆ ಪ್ರೋತ್ಸಾಹ ತುಂಬುತ್ತಿದ್ದರು. ಆರೋಗ್ಯದಲ್ಲಿ ತುಂಬು ಜವ್ವನ ಹೊಂದಿದ್ದ ಕರ್ಕೇರ ಅವರು, ಹಠಾತ್ ನಿಧನರಾಗಿರುವುದು ಅವರ ಆಪ್ತರಲ್ಲಿ ಮತ್ತು ತುಳು ಸಂಘಟಕರಲ್ಲಿ ದಿಗ್ಭ್ರಮೆ ಮೂಡಿಸಿದೆ
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm