ಬ್ರೇಕಿಂಗ್ ನ್ಯೂಸ್
12-09-22 10:22 pm Mangalore Correspondent ಕರಾವಳಿ
ಉಳ್ಳಾಲ, ಸೆ.12 : ಕೊರೊನಾ ಲಾಕ್ಡೌನ್ ಸಂದರ್ಭ ಹಣ್ಣು ಕೀಳಲು ಹಲಸಿನ ಮರವೇರಿ ಕೆಳಗೆ ಬಿದ್ದು ಸೊಂಟದ ಸ್ವಾಧೀನವನ್ನೇ ಕಳಕೊಂಡಿದ್ದ ಬೆಳ್ಮ ಗ್ರಾಮದ ಅಶಕ್ತ ಕುಟುಂಬದ ಯುವಕನೋರ್ವನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂಪಾಯಿ ಪರಿಹಾರ ಧನ ಲಭಿಸಿದೆ.
ಬೆಳ್ಮ ಗ್ರಾಮದ ಬರಿಕೆ, ಕುಂಭಲಚ್ಚಿಲ್ ನಿವಾಸಿಗಳಾದ ಬಾಲಕೃಷ್ಣ ಪೂಜಾರಿ ಮತ್ತು ಪುಷ್ಪಾವತಿ ದಂಪತಿಯ ದ್ವಿತೀಯ ಪುತ್ರ ಭಾಸ್ಕರ ಪೂಜಾರಿ ಅವರು ಕಳೆದ ಒಂದೂವರೆ ವರುಷದ ಹಿಂದೆ ಹಣ್ಣು ಕೀಳಲು ಹಲಸಿನ ಮರ ಏರಿದ್ದಾಗ ರೆಂಬೆ ತುಂಡಾಗಿ ಕೆಳಗೆ ಬಿದ್ದು ಸೊಂಟದ ಸ್ವಾಧೀನ ಕಳಕೊಂಡು ಹಾಸಿಗೆ ಹಿಡಿದಿದ್ದರು. ಭಾಸ್ಕರ್ ಅವರ ಚಿಕಿತ್ಸೆಗೆ ಅನೇಕ ಸಂಘ, ಸಂಸ್ಥೆಗಳು, ಸ್ಥಳೀಯರು ಸೇರಿ ಆರ್ಥಿಕ ಸಹಕಾರ ನೀಡಿದ್ದರು.ಆ ಸಂದರ್ಭದಲ್ಲಿ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಭಾಸ್ಕರ್ ಅವರಿಗೆ ವೈಯಕ್ತಿಕ ಸಹಾಯ ನೀಡಿದಲ್ಲದೆ ವಿಶೇಷ ಮುತುವರ್ಜಿ ವಹಿಸಿ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಪರಿಹಾರ ನಿಧಿಗಾಗಿ ಮನವಿ ಮಾಡಿದ್ದರು. ಮಾಜಿ ಸಿಎಂ ಬಿಎಸ್ ವೈ ಆದೇಶದಂತೆ ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಭಾಸ್ಕರ್ ಅವರಿಗೆ ಒಂದು ಲಕ್ಷ ರೂಪಾಯಿಗಳನ್ನ ಪರಿಹಾರವಾಗಿ ನೀಡಿದ್ದಾರೆ.



ಅಲೆಮಾರಿ, ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ದಿ ಮೈಸೂರು ಇಲೆಕ್ಟ್ರಿಕಲ್ಸ್ (ಲಿ)ನ ಮಾಜಿ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್ ನೇತೃತ್ವದ ತಂಡದ ಸದಸ್ಯರು ಪರಿಹಾರ ನಿಧಿಯ ಫಲಾನುಭವಿ ಭಾಸ್ಕರ್ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದರು.
ತಮ್ಮ ಮನವಿಗೆ ಸ್ಪಂದಿಸಿ ಪರಿಹಾರ ಧನ ನೀಡಿದ ಮಾಜಿ ಸಿ.ಎಂ ಬಿಎಸ್ ವೈ ಮತ್ತು ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರಿಗೆ ರವೀಂದ್ರ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದು, ಭಾಸ್ಕರ್ ಅವರು ಹಂತ, ಹಂತವಾಗಿ ಚೇತರಿಸುತ್ತಿದ್ದು ಸಮಾಜದ ಸಹೃದಯಿಗಳು ಮುಂದೆಯೂ ಅವರಿಗೆ ಸಹಾಯ, ಸಹಕಾರ ನೀಡುವಂತೆ ಕೋರಿದ್ದಾರೆ.
Ullal Man loses strength to walk after falling down from tree, CM Fund issued after visiting his house in Belman.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm