ಬ್ರೇಕಿಂಗ್ ನ್ಯೂಸ್
12-09-22 10:22 pm Mangalore Correspondent ಕರಾವಳಿ
ಉಳ್ಳಾಲ, ಸೆ.12 : ಕೊರೊನಾ ಲಾಕ್ಡೌನ್ ಸಂದರ್ಭ ಹಣ್ಣು ಕೀಳಲು ಹಲಸಿನ ಮರವೇರಿ ಕೆಳಗೆ ಬಿದ್ದು ಸೊಂಟದ ಸ್ವಾಧೀನವನ್ನೇ ಕಳಕೊಂಡಿದ್ದ ಬೆಳ್ಮ ಗ್ರಾಮದ ಅಶಕ್ತ ಕುಟುಂಬದ ಯುವಕನೋರ್ವನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂಪಾಯಿ ಪರಿಹಾರ ಧನ ಲಭಿಸಿದೆ.
ಬೆಳ್ಮ ಗ್ರಾಮದ ಬರಿಕೆ, ಕುಂಭಲಚ್ಚಿಲ್ ನಿವಾಸಿಗಳಾದ ಬಾಲಕೃಷ್ಣ ಪೂಜಾರಿ ಮತ್ತು ಪುಷ್ಪಾವತಿ ದಂಪತಿಯ ದ್ವಿತೀಯ ಪುತ್ರ ಭಾಸ್ಕರ ಪೂಜಾರಿ ಅವರು ಕಳೆದ ಒಂದೂವರೆ ವರುಷದ ಹಿಂದೆ ಹಣ್ಣು ಕೀಳಲು ಹಲಸಿನ ಮರ ಏರಿದ್ದಾಗ ರೆಂಬೆ ತುಂಡಾಗಿ ಕೆಳಗೆ ಬಿದ್ದು ಸೊಂಟದ ಸ್ವಾಧೀನ ಕಳಕೊಂಡು ಹಾಸಿಗೆ ಹಿಡಿದಿದ್ದರು. ಭಾಸ್ಕರ್ ಅವರ ಚಿಕಿತ್ಸೆಗೆ ಅನೇಕ ಸಂಘ, ಸಂಸ್ಥೆಗಳು, ಸ್ಥಳೀಯರು ಸೇರಿ ಆರ್ಥಿಕ ಸಹಕಾರ ನೀಡಿದ್ದರು.ಆ ಸಂದರ್ಭದಲ್ಲಿ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಭಾಸ್ಕರ್ ಅವರಿಗೆ ವೈಯಕ್ತಿಕ ಸಹಾಯ ನೀಡಿದಲ್ಲದೆ ವಿಶೇಷ ಮುತುವರ್ಜಿ ವಹಿಸಿ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಪರಿಹಾರ ನಿಧಿಗಾಗಿ ಮನವಿ ಮಾಡಿದ್ದರು. ಮಾಜಿ ಸಿಎಂ ಬಿಎಸ್ ವೈ ಆದೇಶದಂತೆ ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಭಾಸ್ಕರ್ ಅವರಿಗೆ ಒಂದು ಲಕ್ಷ ರೂಪಾಯಿಗಳನ್ನ ಪರಿಹಾರವಾಗಿ ನೀಡಿದ್ದಾರೆ.



ಅಲೆಮಾರಿ, ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ದಿ ಮೈಸೂರು ಇಲೆಕ್ಟ್ರಿಕಲ್ಸ್ (ಲಿ)ನ ಮಾಜಿ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್ ನೇತೃತ್ವದ ತಂಡದ ಸದಸ್ಯರು ಪರಿಹಾರ ನಿಧಿಯ ಫಲಾನುಭವಿ ಭಾಸ್ಕರ್ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದರು.
ತಮ್ಮ ಮನವಿಗೆ ಸ್ಪಂದಿಸಿ ಪರಿಹಾರ ಧನ ನೀಡಿದ ಮಾಜಿ ಸಿ.ಎಂ ಬಿಎಸ್ ವೈ ಮತ್ತು ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರಿಗೆ ರವೀಂದ್ರ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದು, ಭಾಸ್ಕರ್ ಅವರು ಹಂತ, ಹಂತವಾಗಿ ಚೇತರಿಸುತ್ತಿದ್ದು ಸಮಾಜದ ಸಹೃದಯಿಗಳು ಮುಂದೆಯೂ ಅವರಿಗೆ ಸಹಾಯ, ಸಹಕಾರ ನೀಡುವಂತೆ ಕೋರಿದ್ದಾರೆ.
Ullal Man loses strength to walk after falling down from tree, CM Fund issued after visiting his house in Belman.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am