ಬ್ರೇಕಿಂಗ್ ನ್ಯೂಸ್
14-09-22 04:36 pm HK News Desk ಕರಾವಳಿ
ಮಂಗಳೂರು, ಸೆ.14: ಬಸ್ಸಿನಿಂದ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಪಿಯುಸಿ ವಿದ್ಯಾರ್ಥಿಯ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ನಗರದ ಇಂಡಿಯಾನ ಆಸ್ಪತ್ರೆಯಿಂದ ಬೆಂಗಳೂರು ಮತ್ತು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಝೀರೋ ಟ್ರಾಫಿಕಲ್ಲಿ ಲಿವರ್, ಕಿಡ್ನಿ ಮತ್ತು ಕಣ್ಣುಗಳನ್ನು ತೆಗೆದು ರವಾನೆ ಮಾಡಲಾಗಿದೆ.
ಉಳ್ಳಾಲದ ತ್ಯಾಗರಾಜ್ – ಮಮತಾ ಕರ್ಕೇರ ಅವರ ಪುತ್ರ, 16 ವರ್ಷದ ಯಶರಾಜ್ ವಾರದ ಹಿಂದೆ ಖಾಸಗಿ ಸಿಟಿ ಬಸ್ಸಿನಲ್ಲಿ ಬರುತ್ತಿದ್ದಾಗ ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಹೆದ್ದಾರಿಯಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟಿದ್ದ. ಬಸ್ಸಿನಲ್ಲಿ ರಶ್ ಇದ್ದ ಕಾರಣ ನೇತಾಡುತ್ತಾ ಹೋಗುತ್ತಿದ್ದಾಗ ಹುಡುಗ ಹೊರಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದ.



ಚಿಂತಾಜನಕ ಸ್ಥಿತಿಯಲ್ಲಿದ್ದ ಯಶರಾಜ್ ನನ್ನು ಬದುಕಿಸಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಕೊನೆಗೆ, ಮಂಗಳವಾರ ಸಂಜೆ ಮೆದುಳು ಡೆಡ್ ಆಗಿರುವುದಾಗಿ ವೈದ್ಯರು ತಿಳಿಸಿದ್ದು, ಅಂಗಾಂಗ ದಾನ ಮಾಡುವ ಬಗ್ಗೆ ಕುಟುಂಬಸ್ಥರಿಗೆ ಸಲಹೆ ಮಾಡಿದ್ದಾರೆ. ಮಗನನ್ನು ಕಳಕೊಂಡ ದುಃಖದ ನಡುವೆಯೂ ಹೆತ್ತವರು ಅಂಗಾಂಗ ದಾನಕ್ಕೆ ಒಪ್ಪಿದ್ದು, ಅದರಂತೆ ರಾಜ್ಯ ಸರಕಾರದ ಜೀವ ಸಾರ್ಥಕತೆ ತಂಡದವರು ಅಂಗಾಂಗ ಕಸಿಗೆ ಏರ್ಪಾಡು ಮಾಡಿದ್ದಾರೆ. ಕಿಡ್ನಿ, ಲಿವರನ್ನು ತೆಗೆದು ನಾಲ್ಕು ಗಂಟೆಯ ಒಳಗೆ ಇನ್ನೊಬ್ಬರಿಗೆ ಕಸಿ ಮಾಡಬೇಕಿರುವುದರಿಂದ ಅದನ್ನು ತುರ್ತಾಗಿ ಒಯ್ದು ಅಳವಡಿಸುವುದು ಸವಾಲಾಗಿರುತ್ತದೆ.



ಹೀಗಾಗಿ ಅಗತ್ಯವುಳ್ಳವರು ಮೊದಲೇ ಬೇಡಿಕೆ ಸಲ್ಲಿಸಿದ್ದರೆ, ಅಂಥವರ ಲಿಸ್ಟ್ ಆಧರಿಸಿ ಜೀವ ಸಾರ್ಥಕತೆ ತಂಡದವರು ಫೈನಲ್ ಮಾಡುತ್ತಾರೆ. ಬೇಡಿಕೆ ಆಧರಿಸಿ ಲಿವರನ್ನು ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೆಎಂಸಿ ಆಸ್ಪತ್ರೆಗೆ ಒಯ್ಯಲು ವ್ಯವಸ್ಥೆ ಮಾಡಿದ್ದರೆ, ಒಂದು ಕಿಡ್ನಿ ಮತ್ತು ಎರಡು ಕಣ್ಣುಗಳನ್ನು ಉಡುಪಿ ಜಿಲ್ಲೆಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಒಯ್ಯಲಾಗಿದೆ. ಬೆಂಗಳೂರಿಗೆ ಒಯ್ಯಲು ನಗರದಿಂದ ಬಜ್ಪೆ ಏರ್ಪೋರ್ಟಿಗೆ ಝೀರೋ ಟ್ರಾಫಿಕ್ ಮಾಡಲಾಗಿತ್ತು. ಅಲ್ಲಿಂದ ವಿಮಾನದ ಮೂಲಕ ಒಯ್ದು ಲಿವರ್ ಕಸಿ ಮಾಡಲು ವ್ಯವಸ್ಥೆ ಮಾಡಲಾಗಿದೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೂ ಝೀರೋ ಟ್ರಾಫಿಕಲ್ಲಿ ಒಯ್ಯಲಾಗಿದೆ. ಮತ್ತೊಂದು ಕಿಡ್ನಿಯನ್ನು ಇಂಡಿಯಾನ ಆಸ್ಪತ್ರೆಯಲ್ಲಿಯೇ ಬೇರೊಬ್ಬ ವ್ಯಕ್ತಿಗೆ ಕಸಿ ಮಾಡಲಾಗಿದೆ.
ಯಶರಾಜ್ ಹೆತ್ತವರಿಗೆ ಒಬ್ಬನೇ ಮಗನಾಗಿದ್ದು ಇನ್ನೊಬ್ಬಳು ತಂಗಿ ಐದನೇ ಕ್ಲಾಸ್ ಕಲಿಯುತ್ತಿದ್ದಾಳೆ. ಯಶರಾಜ್ ಅಕಾಲಿಕ ಮರಣ ಹೆತ್ತವರು, ಸಂಬಂಧಿಕರನ್ನು ಶೋಕದಲ್ಲಿ ಮುಳುಗಿಸಿದ್ದು, ಅಂಗಾಂಗ ಕಸಿ ಮಾಡುವ ಸಂದರ್ಭದಲ್ಲೂ ಸ್ನೇಹಿತರು, ಸಂಬಂಧಿಕರು ಆಸ್ಪತ್ರೆಗೆ ಆಗಮಿಸಿದ್ದರು. ಒಬ್ಬನ ಜೀವ ಉಳಿಸುವಲ್ಲಿ ಅಂಗಾಂಗ ಕಸಿ ಪ್ರಧಾನ ಪಾತ್ರ ವಹಿಸುತ್ತದೆ. ಕಣ್ಣುಗಳನ್ನು ಸಾವಿನ ಬಳಿಕವೂ ಆರು ಗಂಟೆ ಒಳಗೆ ತೆಗೆದು ಇನ್ನೊಬ್ಬನಿಗೆ ಕಸಿ ಮಾಡಬಹುದಾಗಿದ್ದರೆ, ಇತರೇ ಅಂಗಗಳನ್ನು ವ್ಯಕ್ತಿ ಜೀವಂತ ಇರುವಾಗಲೇ ತೆಗೆದು ಕಸಿ ಮಾಡಬೇಕಿರುತ್ತದೆ. ಹೀಗಾಗಿ ಬ್ರೈನ್ ಡೆಡ್ ಸಂದರ್ಭದಲ್ಲಿ ಜೀವ ಸಾರ್ಥಕತೆ ಅನ್ನುವ ಯೋಜನೆಯಡಿ ಅಂಗಾಂಗ ಕಸಿಯನ್ನು ರಾಜ್ಯ ಸರಕಾರದಿಂದಲೇ ಮಾಡಲಾಗುತ್ತಿದೆ.
Mangalore Viral organs of youth from ullal who was brian dead transported to Bangalore via zero traffic. Yasraj a PUC student who had a fall from the bus was admitted in Indiana hospital and later was declared brian dead. The family later then decided to donate the organs which will now save many lives.
03-01-26 10:40 pm
Bangalore Correspondent
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
Ballari SP Pavan Nejjur suspended: ಬಳ್ಳಾರಿ ಘರ...
02-01-26 10:24 pm
CM Siddaramaiah, Ballari Clash, MLA Bharat Re...
02-01-26 06:09 pm
02-01-26 06:43 pm
HK News Desk
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
03-01-26 11:04 pm
Mangalore Correspondent
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
ಕೆಎಸ್ಆರ್ಟಿಸಿ ಮಂಗಳೂರು - ಉಡುಪಿ- ಬೆಂಗಳೂರು ಬಸ್ ಪ್...
03-01-26 09:10 pm
Harish Kumar, Koli Anka Issue: ಕೋಳಿ ಅಂಕ ವಿಚಾರ...
03-01-26 08:12 pm
Speaker U.T. Khader: ಶಾಸಕರು ಸಿನಿಮಾ ರೀತಿಯಲ್ಲಿ...
03-01-26 07:43 pm
03-01-26 03:43 pm
Mangalore Correspondent
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm
ಹೊಸ ವರ್ಷ ಸಂಭ್ರಮಾಚರಣೆ ; ಮಂಗಳೂರಿನಲ್ಲಿ ಒಂದು ಸಾವಿ...
01-01-26 08:25 pm
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm