ಬ್ರೇಕಿಂಗ್ ನ್ಯೂಸ್
15-09-22 06:20 pm Mangalore Correspondent ಕರಾವಳಿ
ಮಂಗಳೂರು, ಸೆ.15 : ಸುರತ್ಕಲ್ ಎನ್ ಐ ಟಿ ಕೆ ಬಳಿಯಲ್ಲಿರುವ ಅಕ್ರಮ ಟೋಲ್ ಗೇಟ್ ಕಡೆಗೂ ತೆರವುಗೊಳ್ಳುವುದು ಬಹುತೇಕ ಖಚಿತ ಆಗಿದೆ. ಟೋಲ್ ತೆರವಾದರೆ ಅಲ್ಲಿ ಕೆಲಸಕ್ಕಿದ್ದ 30ರಷ್ಟು ಕಾರ್ಮಿಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಅವರ ಜೀವನ ಭದ್ರತೆಗಾಗಿ ಶಿಕ್ಷಣ, ಸಾಮರ್ಥ್ಯ ಅನುಸರಿಸಿ ಬೇರೆ ಕಡೆಗಳಲ್ಲಿ ಉದ್ಯೋಗ ದೊರಕಿಸುವ ಭರವಸೆ ನೀಡುತ್ತೇನೆ ಎಂದು ಕೆಪಿಸಿಸಿ ಸಂಯೋಜಕಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಟೋಲ್ ಗೇಟನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ನಳಿನ್ ಕುಮಾರ್ ಕಟೀಲ್ ತೆರವು ಮಾಡುವುದಾಗಿ ದಿನಾಂಕದ ಮೇಲೆ ದಿನಾಂಕ ಘೋಷಣೆ ಮಾಡಿದ್ದರೂ ಟೋಲ್ ಮುಚ್ಚಲು ಅವರಿಂದ ಸಾಧ್ಯವಾಗಿಲ್ಲ. ನೂರಾರು ಸಮಾನ ಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಕೇಂದ್ರ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಸದ್ಯ ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ ಕುಟುಂಬದ ಜೀವನ ನಿರ್ವಹಣೆ ಕಷ್ಟವಾಗಲಿದೆ. ಇದನ್ನು ಮನಗಂಡು ಅವರಿಗೆ ಮುಂದಿನ ದಿನಗಳಲ್ಲಿ ಉದ್ಯೋಗ ನೀಡುವ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಒಟ್ಟು 31 ಮಂದಿ ಕಾರ್ಮಿಕರು ದುಡಿಯುತ್ತಿದ್ದು ಅವರಲ್ಲಿ ಯುವಕ-ಯುವತಿಯರು ಸೇರಿದ್ದಾರೆ. ಟೋಲ್ ತೆರವುಗೊಳ್ಳುವುದರಿಂದ ಅವರು ಉದ್ಯೋಗ ಕಳೆದುಕೊಳ್ಳಲಿದ್ದು ಕುಟುಂಬಕ್ಕೆ ಆರ್ಥಿಕ ಹೊರೆ ಬೀಳಲಿದೆ. ಇದನ್ನು ಮನಗಂಡು ಅವರ ವಿದ್ಯಾರ್ಹತೆ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ನೀಡಲು ಈಗಾಗಲೇ ವಿವಿಧ ಕಂಪೆನಿಗಳು ಮತ್ತು ಉದ್ಯಮಿಗಳ ಜೊತೆ ಚರ್ಚಿಸಿದ್ದೇನೆ ಎಂದು ಪ್ರತಿಭಾ ಹೇಳಿದರು.
ಇದಲ್ಲದೆ, ಟೋಲ್ ಗೇಟ್ ನಲ್ಲಿ ದುಡಿಯುತ್ತಿರುವ ಕಾರ್ಮಿಕರ ಮೇಲೆ ಹತ್ತಾರು ಕ್ರಿಮಿನಲ್ ಕೇಸ್ ಗಳಿದ್ದು ಟೋಲ್ ತೆರವುಗೊಂಡ ಬಳಿಕ ಅತಂತ್ರ ಸ್ಥಿತಿ ಎದುರಿಸಲಿದ್ದಾರೆ. ಕಾರ್ಮಿಕರು ಮತ್ತವರ ಕುಟುಂಬ ಸದಸ್ಯರು ಸಂಪರ್ಕದಲ್ಲಿದ್ದು ಟೋಲ್ ತೆರವುಗೊಂಡ ತಕ್ಷಣ ಅವರ ಉದ್ಯೋಗ ಭದ್ರತೆಗೆ ಸೂಕ್ತ ಕ್ರಮ ಜರುಗಿಸುವುದಾಗಿ ಪ್ರತಿಭಾ ತಿಳಿಸಿದ್ದಾರೆ.
Surathkal toll gate closure, staff will be given new job says congress Pratibha Kulai.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am