ಬ್ರೇಕಿಂಗ್ ನ್ಯೂಸ್
15-09-22 10:59 pm Mangalore Correspondent ಕರಾವಳಿ
ಉಳ್ಳಾಲ, ಸೆ.15 : ಉಳ್ಳಾಲ ನಗರಸಭೆಗೆ ತೆರಿಗೆ ಹಣವನ್ನೂ ಅಧಿಕಾರಿಗಳು ಪಾವತಿಸದೆ ವಂಚಿಸುತ್ತಿದ್ದು, ನಾನಾ ರೀತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ತನ್ನ ಕ್ಷೇತ್ರಕ್ಕೆ ಅನುದಾನ ಮಂಜೂರಾದರೂ ಕಾಮಗಾರಿ ವಿಳಂಬಿಸಿದ ನಗರಾಡಳಿತದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರಾದ ರವಿಚಂದ್ರ ಗಟ್ಟಿ ಅರೆ ನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಯಾನೆ ಪಾನಕ ರವಿ ನಗರಾಡಳಿತದ ವಿರುದ್ಧವೇ ಅರೆನಗ್ನವಾಗಿ ಪ್ರತಿಭಟಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಒಂದು ವೀಡಿಯೋ ತುಣುಕಲ್ಲಿ ನಗರಸಭೆಯ ಭ್ರಷ್ಟಾಚಾರದ ಬಗ್ಗೆ ರವಿ ಮಾತನಾಡಿದ್ದು ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷ ಆಯೂಬ್ ಮಂಚಿಲರವರು ನಲ್ವತ್ತರಿಂದ ಐವತ್ತು ಸಾವಿರ ರೂಪಾಯಿಗಳನ್ನ ಪಡೆಯುತ್ತಾರೆಂದು ಆರೋಪಿಸಿದ್ದಾರೆ.


ಅಲ್ಲದೆ ನಗರದಾದ್ಯಂತ ಸಂಗ್ರಹಿಸಿದ ತೆರಿಗೆ ಹಣವನ್ನೂ ನಗರಸಭೆಗೆ ಕಟ್ಟದೆ ಜನರಿಗೆ ಸೈಬರ್ ನಲ್ಲಿ ಮುದ್ರಿತ ನಕಲಿ ರಶೀದಿ ನೀಡಿ ವಂಚಿಸುತ್ತಿದ್ದು ಇದರಲ್ಲಿ ತುಳಸಿ, ಚಂದ್ರ ಮತ್ತು ಆರೋಗ್ಯ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ್ದಾರೆ. ನಗರಸಭೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗುತ್ತಿದ್ದರೂ ಹಿಂದಿನ ಪೌರಾಯುಕ್ತ ರಾಯಪ್ಪ ಅವರು ಕೇವಲ ಸ್ವಚ್ಛ ಭಾರತವೆಂದು ಕಸದ ಹಿಂದೆ ಬಿದ್ದಿದ್ದರು. ಇದೀಗ ನೂತನವಾಗಿ ಬಂದಿರುವ ಪೌರಾಯುಕ್ತರು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕ ಬೇಕೆಂದು ಒತ್ತಾಯಿಸಿದ್ದಾರೆ.

ರವಿ ಪ್ರತಿನಿಧಿಸುತ್ತಿರುವ ವಾರ್ಡ್ ಗೆ ಕಾಮಗಾರಿ ನಡೆಸಲು 14 ನೇ ಹಣಕಾಸು ಯೋಜನೆಯಡಿ ಅನುದಾನ ಮಂಜೂರಾದರೂ ಕಾಮಗಾರಿ ಆರಂಭಿಸದ ಧೋರಣೆ ವಿರುದ್ಧ ಗುರುವಾರ ನಗರಾಡಳಿತದ ಕಚೇರಿಯಲ್ಲಿ ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
Mangalore Ullal town municipality corruption, Congress member does half naked protest.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm