ಬ್ರೇಕಿಂಗ್ ನ್ಯೂಸ್
15-09-22 10:59 pm Mangalore Correspondent ಕರಾವಳಿ
ಉಳ್ಳಾಲ, ಸೆ.15 : ಉಳ್ಳಾಲ ನಗರಸಭೆಗೆ ತೆರಿಗೆ ಹಣವನ್ನೂ ಅಧಿಕಾರಿಗಳು ಪಾವತಿಸದೆ ವಂಚಿಸುತ್ತಿದ್ದು, ನಾನಾ ರೀತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ತನ್ನ ಕ್ಷೇತ್ರಕ್ಕೆ ಅನುದಾನ ಮಂಜೂರಾದರೂ ಕಾಮಗಾರಿ ವಿಳಂಬಿಸಿದ ನಗರಾಡಳಿತದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರಾದ ರವಿಚಂದ್ರ ಗಟ್ಟಿ ಅರೆ ನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಯಾನೆ ಪಾನಕ ರವಿ ನಗರಾಡಳಿತದ ವಿರುದ್ಧವೇ ಅರೆನಗ್ನವಾಗಿ ಪ್ರತಿಭಟಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಒಂದು ವೀಡಿಯೋ ತುಣುಕಲ್ಲಿ ನಗರಸಭೆಯ ಭ್ರಷ್ಟಾಚಾರದ ಬಗ್ಗೆ ರವಿ ಮಾತನಾಡಿದ್ದು ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷ ಆಯೂಬ್ ಮಂಚಿಲರವರು ನಲ್ವತ್ತರಿಂದ ಐವತ್ತು ಸಾವಿರ ರೂಪಾಯಿಗಳನ್ನ ಪಡೆಯುತ್ತಾರೆಂದು ಆರೋಪಿಸಿದ್ದಾರೆ.


ಅಲ್ಲದೆ ನಗರದಾದ್ಯಂತ ಸಂಗ್ರಹಿಸಿದ ತೆರಿಗೆ ಹಣವನ್ನೂ ನಗರಸಭೆಗೆ ಕಟ್ಟದೆ ಜನರಿಗೆ ಸೈಬರ್ ನಲ್ಲಿ ಮುದ್ರಿತ ನಕಲಿ ರಶೀದಿ ನೀಡಿ ವಂಚಿಸುತ್ತಿದ್ದು ಇದರಲ್ಲಿ ತುಳಸಿ, ಚಂದ್ರ ಮತ್ತು ಆರೋಗ್ಯ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ್ದಾರೆ. ನಗರಸಭೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗುತ್ತಿದ್ದರೂ ಹಿಂದಿನ ಪೌರಾಯುಕ್ತ ರಾಯಪ್ಪ ಅವರು ಕೇವಲ ಸ್ವಚ್ಛ ಭಾರತವೆಂದು ಕಸದ ಹಿಂದೆ ಬಿದ್ದಿದ್ದರು. ಇದೀಗ ನೂತನವಾಗಿ ಬಂದಿರುವ ಪೌರಾಯುಕ್ತರು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕ ಬೇಕೆಂದು ಒತ್ತಾಯಿಸಿದ್ದಾರೆ.

ರವಿ ಪ್ರತಿನಿಧಿಸುತ್ತಿರುವ ವಾರ್ಡ್ ಗೆ ಕಾಮಗಾರಿ ನಡೆಸಲು 14 ನೇ ಹಣಕಾಸು ಯೋಜನೆಯಡಿ ಅನುದಾನ ಮಂಜೂರಾದರೂ ಕಾಮಗಾರಿ ಆರಂಭಿಸದ ಧೋರಣೆ ವಿರುದ್ಧ ಗುರುವಾರ ನಗರಾಡಳಿತದ ಕಚೇರಿಯಲ್ಲಿ ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
Mangalore Ullal town municipality corruption, Congress member does half naked protest.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 04:31 pm
HK News Staffer
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
11-07-26 04:26 pm
HK News Staffer
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
11-07-26 04:28 pm
HK News Staffer
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm