ಬ್ರೇಕಿಂಗ್ ನ್ಯೂಸ್
16-09-22 05:17 pm Mangalore Correspondent ಕರಾವಳಿ
ಉಳ್ಳಾಲ, ಸೆ.16 : ಹೆದ್ದಾರಿಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಮೀನು ಸಾಗಿಸುವ ಕ್ಯಾಂಟರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರಾ.ಹೆ. 66 ರ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ, ಕುಂಬಳೆ ಉಲ್ಲೋಡಿ ನಿವಾಸಿ ನಿತಿನ್ ಮಾನ್ಯ(27) ಮೃತ ಯುವಕ. ನಿತಿನ್ ಅವರು ಟೆಲ್ಕೊ ಸೋಲಾರ್ ಕಂಪನಿಯ ಕಾಸರಗೋಡು ಶಾಖೆಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದರಂತೆ. ಅವರಿಂದು ಕೃಷ್ಣ ಪ್ರಸಾದ್ ಎಂಬವರ ಮೋಟಾರ್ ಬೈಕಲ್ಲಿ ಮಂಗಳೂರಿಗೆ ಬಂದು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.



ನಿತಿನ್ ಬೈಕಲ್ಲಿ ಮಂಗಳೂರಿನಿಂದ ಕುಂಬಳೆಗೆ ವಾಪಸಾಗುತ್ತಿದ್ದ ವೇಳೆ ತೊಕ್ಕೊಟ್ಟು ಸಮೀಪದ ಬೈಪಾಸ್ ಹೆದ್ದಾರಿಯಲ್ಲಿ ವಾಹನಗಳ ವೇಗ ಮಿತಿಗಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟಿದ್ದಾರೆ. ಇದೇ ವೇಳೆ ಕೇರಳಕ್ಕೆ ಧಾವಿಸುತ್ತಿದ್ದ ಮೀನು ತುಂಬಿದ ಕ್ಯಾಂಟರ್ ಲಾರಿ ನಿತಿನ್ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಕೃಷ್ಣಪ್ರಸಾದ್ ಅವರ ಬೈಕನ್ನ ನಿತಿನ್ ಕಳೆದ ಎರಡು ವಾರಗಳಿಂದ ಬಳಸುತ್ತಿದ್ದರಂತೆ. ನಿತಿನ್ ಅವರು ಇಂದು ಮಂಗಳೂರಿಗೆ ಯಾಕಾಗಿ ಬಂದಿದ್ದಾರೆಂದು ತಿಳಿದಿಲ್ಲ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A 22-year-old youth was killed in a road accident at Kumpala Bypass road on National Highway here in Mangalore. The deceased is identified as Nithin Manya, a resident of Kumble in Kasargod. He was killed after the truck rammed him.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 11:41 am
Mangalore Correspondent
ಮಂಗಳೂರಿನ ಸ್ವಸ್ತಿಕಾ ಬಿಸಿನೆಸ್ ಸ್ಕೂಲ್ ರಾಜ್ಯದ ಮೊದ...
11-02-26 06:00 pm
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
11-02-26 10:54 pm
Udupi Correspondent
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am